ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ಜ.14 ರಂದು ರಾತ್ರಿ ನಡೆದಿದೆ.
ಯಮನವ್ವ(40) ಕೊಲೆಯಾದ ಮಹಿಳೆ. ಶ್ರೀಶೈಲ ಪಾಟೀಲ್(67) ಕೊಲೆಗೈದ ಆರೋಪಿ. ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನೆ ಪಡೆದಿದ್ದ ಯಮನವ್ವ, ಶ್ರೀಶೈಲ ಪಾಟೀಲ್ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಇತ್ತೀಚೆಗೆ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಷಯ ತಿಳಿದ ನಂತರ ಇಬ್ಬರ ಮಧ್ಯೆ ತೀವ್ರವಾದ ಜಗಳ ಉಂಟಾಗಿತ್ತು. ಬಳಿಕ ಶ್ರೀಶೈಲ ಯಮನವ್ವಳ ಕಿವಿಗೆ ಬಲವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆ ಉಸಿರು ನಿಂತ ಮೇಲೆ ಆಘಾತಗೊಂಡು ಮರುದಿನ ಬೆಳಿಗ್ಗೆ ಯಮನವ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಕ್ಕಪಕ್ಕದವರಿಗೆ ಆತನೇ ತಿಳಿಸಿದ್ದಾನೆ. ಬಳಿಕ ಮೃತದೇಹದ ಮುಂದೆ ಮೊಸಳೆ ಕಣ್ಣಿರು ಹಾಕಿದ್ದಾನೆ. ಇನ್ನು ಪೊಲೀಸರಿಗೂ ಆತನೇ ಮಾಹಿತಿ ನೀಡಿದ್ದಾನೆ. ವಿಚಾರಣೆಯ ವೇಳೆ ಆರೋಪಿಯ ಬಣ್ಣ ಬಯಲಾಗಿದ್ದು ಬಳಿಕ ಸತ್ಯ ಒಪ್ಪಿಕೊಂಡಿದ್ದಾನೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…