ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ಜ.14 ರಂದು ರಾತ್ರಿ ನಡೆದಿದೆ.
ಯಮನವ್ವ(40) ಕೊಲೆಯಾದ ಮಹಿಳೆ. ಶ್ರೀಶೈಲ ಪಾಟೀಲ್(67) ಕೊಲೆಗೈದ ಆರೋಪಿ. ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನೆ ಪಡೆದಿದ್ದ ಯಮನವ್ವ, ಶ್ರೀಶೈಲ ಪಾಟೀಲ್ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಇತ್ತೀಚೆಗೆ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಷಯ ತಿಳಿದ ನಂತರ ಇಬ್ಬರ ಮಧ್ಯೆ ತೀವ್ರವಾದ ಜಗಳ ಉಂಟಾಗಿತ್ತು. ಬಳಿಕ ಶ್ರೀಶೈಲ ಯಮನವ್ವಳ ಕಿವಿಗೆ ಬಲವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆ ಉಸಿರು ನಿಂತ ಮೇಲೆ ಆಘಾತಗೊಂಡು ಮರುದಿನ ಬೆಳಿಗ್ಗೆ ಯಮನವ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಕ್ಕಪಕ್ಕದವರಿಗೆ ಆತನೇ ತಿಳಿಸಿದ್ದಾನೆ. ಬಳಿಕ ಮೃತದೇಹದ ಮುಂದೆ ಮೊಸಳೆ ಕಣ್ಣಿರು ಹಾಕಿದ್ದಾನೆ. ಇನ್ನು ಪೊಲೀಸರಿಗೂ ಆತನೇ ಮಾಹಿತಿ ನೀಡಿದ್ದಾನೆ. ವಿಚಾರಣೆಯ ವೇಳೆ ಆರೋಪಿಯ ಬಣ್ಣ ಬಯಲಾಗಿದ್ದು ಬಳಿಕ ಸತ್ಯ ಒಪ್ಪಿಕೊಂಡಿದ್ದಾನೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…