ಹಿಂದೂ ಚೆನ್ನಾಗಿರುವಲ್ಲಿ ಯಾವುದೇ ಸಮಸ್ಯೆ ಇಲ್ಲವಾಗಿದ್ದು, ಹಿಂದೂ ದುರ್ಬಲನಾದಾಗ ಸಾಕಷ್ಟು ಸಮಸ್ಯೆಗಳು ಎದುರಾಗುತ್ತದೆ.
ಹೀಗಾಗಿ ಹಿಂದೂ ಸಮಾಜ ಸಂಘಟಿತವಾದಾಗ ಜಗತ್ತಿನಲ್ಲಿ ಶಾಂತಿ- ಸಾಮರಸ್ಯ ನೆಲೆಸುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಪ್ರಾಂತ ಪ್ರಚಾರಕ ಅರುಣ್ ಕುಮಾರ್ ಹೇಳಿದ್ದಾರೆ. ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನ ವಠಾರದಲ್ಲಿ ಬಂಟ್ವಾಳ ತಾಲೂಕು ಹಿಂದೂ ಸಂಗಮ ಆಯೋಜನಾ ಸಮಿತಿ ಫರಂಗಿಪೇಟೆ ಮಂಡಲದ ವತಿಯಿಂದ ನಡೆದ ಹಿಂದೂ ಸಂಗಮ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ್ದಾರೆ.
ಪ್ರಸ್ತುತ ಜಾಗತಿಕ ಗೂಂಡಾಗಿರಿ ನಡೆಯುತ್ತಿದ್ದು, ಸಾಕಷ್ಟು ದೇಶಗಳು ಹೊಡೆತಗಳನ್ನು ತಿಂದಿವೆ. ಆದರೆ ಭಾರತ ತನ್ನ ಪರಿಮಾಣು ಶಕ್ತಿಯ ಫಲವಾಗಿ ಭದ್ರವಾಗಿದೆ. ದೇಶದೊಳಗಿನ ವಿಕೃತ ಮನಸ್ಸುಗಳು ಕೂಡ ದೇಶದ ನಾಯಕತ್ವವನ್ನು ಪ್ರಶ್ನಿಸಿ ಸುಳ್ಳು ಆರೋಪಗಳನ್ನು ಹೊರಿಸಿ ಪ್ರಚೋದಿಸುವ ಕಾರ್ಯ ನಡೆಯುತ್ತಿದೆ.
ಹಲವು ಕಾರಣಕ್ಕೆ ಹಿಂದೂ ಸಮಾಜದ ಮೇಲೆ ದಾಳಿಗಳು ನಡೆಯುತ್ತಿದ್ದು, ನಮ್ಮ ಕುಟುಂಬದ ಮಂದಿ ಒಗ್ಗಟ್ಟಾಗಿ ಕೂತು ಮುಂದಿನ 25 ವರ್ಷಗಳ ಬಳಿಕ ನಮ್ಮ ಅಸ್ತಿತ್ವದ ಕುರಿತು ಗಂಭೀರ ಚಿಂತನೆ ನಡೆಸಬೇಕಿದೆ. ಸೂರ್ಯ- ಚಂದ್ರ ಇರುವವರೆಗೂ ಹಿಂದೂ ಸಮಾಜ ಇರಲಿದ್ದು, ಹೀಗಾಗಿ ಎಲ್ಲಾ ರೀತಿಯ ಆತಂಕಗಳನ್ನು ಬಿಟ್ಟು ಸಂಘಟಿತರಾಗಿ ನಮ್ಮ ಸಂಸ್ಕೃತಿ- ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಬದುಕು ಸಾಗಿಸಬೇಕಿದೆ ಎಂದಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…