ಜನ ಮನದ ನಾಡಿ ಮಿಡಿತ

Advertisement

ಮೈಸೂರು: “ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ” ಕುರಿತು ಕೃಷಿ ವಿಚಾರ ಸಂಕಿರಣ ಉದ್ಘಾಟನೆ….!

ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ “ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ” ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದ್ದಾರೆ. ಈ ವೇಳೆ ಸಚಿವರು ಪ್ರಗತಿಪರ ರೈತರಿಗೆ ಹಾಗೂ ಪ್ರಗತಿಪರ ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿದ್ರು, ಬಳಿಕ ಕ್ರಾಪ್ ಇಂಪ್ರುಮೆಂಟ್, ಕ್ರಾಪ್ ಪ್ರೊಡಕ್ಷನ್, ಕ್ರಾಪ್ ಪ್ರೊಟೆಕ್ಷನ್ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ.

ಜೆ.ಎಸ್.ಎಸ್ ಮಠ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಕೇವಲ ಮೈಸೂರು ಭಾಗದ ಮಕ್ಕಳಿಗೆ ಸೀಮಿತವಾಗದೆ ವಿವಿಧ ರಾಜ್ಯಗಳ ಮಕ್ಕಳು ಇಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಸಾಮಾಜಿಕ ಬದ್ಧತೆ ಹೊಂದಿರುವ ಜೆ ಎಸ್ ಎಸ್ ಸಂಸ್ಥೆ ಅಕ್ಷರ, ಅನ್ನದ ಜೊತೆಗೆ ಸಂಸ್ಕೃತಿಯನ್ನು ಕಲಿಸುತ್ತಿದೆ ಎಂದಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ವಾಟಾಳು ಸೂರ್ಯಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು, ಕನಕಪುರದ ಶ್ರೀ ದೇಗುಲ ಮಠದ ಡಾ. ಶ್ರೀ ಚನ್ನಬಸವ ಸ್ವಾಮಿಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!