ಜನ ಮನದ ನಾಡಿ ಮಿಡಿತ

Advertisement

ಮೈಸೂರು: “ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ” ಕುರಿತು ಕೃಷಿ ವಿಚಾರ ಸಂಕಿರಣ ಉದ್ಘಾಟನೆ….!

ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ “ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ” ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದ್ದಾರೆ. ಈ ವೇಳೆ ಸಚಿವರು ಪ್ರಗತಿಪರ ರೈತರಿಗೆ ಹಾಗೂ ಪ್ರಗತಿಪರ ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿದ್ರು, ಬಳಿಕ ಕ್ರಾಪ್ ಇಂಪ್ರುಮೆಂಟ್, ಕ್ರಾಪ್ ಪ್ರೊಡಕ್ಷನ್, ಕ್ರಾಪ್ ಪ್ರೊಟೆಕ್ಷನ್ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ.

ಜೆ.ಎಸ್.ಎಸ್ ಮಠ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಕೇವಲ ಮೈಸೂರು ಭಾಗದ ಮಕ್ಕಳಿಗೆ ಸೀಮಿತವಾಗದೆ ವಿವಿಧ ರಾಜ್ಯಗಳ ಮಕ್ಕಳು ಇಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಸಾಮಾಜಿಕ ಬದ್ಧತೆ ಹೊಂದಿರುವ ಜೆ ಎಸ್ ಎಸ್ ಸಂಸ್ಥೆ ಅಕ್ಷರ, ಅನ್ನದ ಜೊತೆಗೆ ಸಂಸ್ಕೃತಿಯನ್ನು ಕಲಿಸುತ್ತಿದೆ ಎಂದಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ವಾಟಾಳು ಸೂರ್ಯಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು, ಕನಕಪುರದ ಶ್ರೀ ದೇಗುಲ ಮಠದ ಡಾ. ಶ್ರೀ ಚನ್ನಬಸವ ಸ್ವಾಮಿಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!