ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಪ್ರದೇಶದಲ್ಲಿ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಲ್ಲಮೊಗ್ರು ಗ್ರಾಮದ ಸುಜಿತ್ ಹಾಗೂ ಗೋಪಾಲ್ ನಾಯರ್ ಅವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.

ಸುಜಿತ್ ಹಾಗೂ ಹರಿಪ್ರಸಾದ್ ತಮ್ಮ ಇತರ ಸ್ನೇಹಿತರೊಂದಿಗೆ ನದಿದಡಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಾರ್ವಜನಿಕರಿಂದ ದೊರೆತ ಮಾಹಿತಿಯಂತೆ, ಸುಜಿತ್ ನೀರಿಗೆ ಇಳಿದು ಈಜಾಟಕ್ಕೆ ಪ್ರಯತ್ನಿಸಿದ ವೇಳೆ ಈಜು ಬಾರದೇ ನೀರಿನ ಆಳಕ್ಕೆ ಸಿಲುಕಿದ್ದಾನೆ. ಸುಜಿತ್ ಮುಳುಗುತ್ತಿರುವುದನ್ನು ಕಂಡ ಹರಿಪ್ರಸಾದ್ ಅವನನ್ನು ರಕ್ಷಿಸಲು ನೀರಿಗೆ ಇಳಿದರೂ, ಇಬ್ಬರೂ ನೀರಿನ ಒಳಗೆ ಸಿಲುಕಿ ಮೃತಪಟ್ಟಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಇಬ್ಬರ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಕೈಗೊಂಡಿದ್ದಾರೆ. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!