ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಪ್ರದೇಶದಲ್ಲಿ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಲ್ಲಮೊಗ್ರು ಗ್ರಾಮದ ಸುಜಿತ್ ಹಾಗೂ ಗೋಪಾಲ್ ನಾಯರ್ ಅವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.
ಸುಜಿತ್ ಹಾಗೂ ಹರಿಪ್ರಸಾದ್ ತಮ್ಮ ಇತರ ಸ್ನೇಹಿತರೊಂದಿಗೆ ನದಿದಡಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಾರ್ವಜನಿಕರಿಂದ ದೊರೆತ ಮಾಹಿತಿಯಂತೆ, ಸುಜಿತ್ ನೀರಿಗೆ ಇಳಿದು ಈಜಾಟಕ್ಕೆ ಪ್ರಯತ್ನಿಸಿದ ವೇಳೆ ಈಜು ಬಾರದೇ ನೀರಿನ ಆಳಕ್ಕೆ ಸಿಲುಕಿದ್ದಾನೆ. ಸುಜಿತ್ ಮುಳುಗುತ್ತಿರುವುದನ್ನು ಕಂಡ ಹರಿಪ್ರಸಾದ್ ಅವನನ್ನು ರಕ್ಷಿಸಲು ನೀರಿಗೆ ಇಳಿದರೂ, ಇಬ್ಬರೂ ನೀರಿನ ಒಳಗೆ ಸಿಲುಕಿ ಮೃತಪಟ್ಟಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಇಬ್ಬರ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಕೈಗೊಂಡಿದ್ದಾರೆ. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…