ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ವೈಟ್‌ಫೀಲ್ಡ್ನಲ್ಲಿ ಕಾರು ಅಡ್ಡಗಟ್ಟಿ ದಂಪತಿಗೆ ಬೆದರಿಕೆ; ಆರೋಪಿ ಅರೆಸ್ಟ್!

ಜನವರಿ 16ರಂದು ಹೂಡಿ ಜಂಕ್ಷನ್ ಬಳಿ ಕಾರೊಂದನ್ನು ಅಡ್ಡಗಟ್ಟಿ ಮಹಿಳೆಯರು ಮತ್ತು ಮಕ್ಕಳ ಮುಂದೆ ಚಾಕು ಪ್ರದರ್ಶಿಸಿ ಯುವಕನೊಬ್ಬ ಪುಂಡಾಟ ಮೆರೆದಿದ್ದ. ಇನ್ನು 25 ವರ್ಷದ ಆರ್.ಟಿ.ನಗರದ ಬಳಿಯ ಕನಕನಗರ ನಿವಾಸಿ ಮೀನು ಮಾರಾಟಗಾರ ಸೈಯದ್ ಅರ್ಬಾಜ್ ಖಾನ್‌ನನ್ನು ಪೊಲೀಸರು ಆತನ ವಾಹನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿ ಈ ಹಿಂದೆಯೂ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈತ ಸಂಜೆ ಕಾಡುಗೋಡಿ ಬಳಿ ಕಾರಿನಲ್ಲಿ ಹೋಗುತ್ತಿದ್ದ ದಂಪತಿಯ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದ. ನಂತರ ದಂಪತಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿದ್ದಾಗ ಆರೋಪಿಯು ಬೈಕ್‌ನಿಂದ ಕೆಳಗಿಳಿದು ಬಂದು ನಡು ರಸ್ತೆಯಲ್ಲೆ ದಂಪತಿಯೊಂದಿಗೆ ಗಲಾಟೆ ಮಾಡಿದ್ದ. ಈ ವೇಳೆ ಅರ್ಬಾಜ್ ಖಾನ್, ದಂಪತಿಗೆ ಡ್ಯಾಗರ್ ತೋರಿಸಿ ಸ್ಥಳದಲ್ಲೆ ಅವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದು, ಅದರ ದೃಶ್ಯಾವಳಿಗಳು ದಂಪತಿಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಇದರ ಬೆನ್ನಲ್ಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೈಕ್‌ನ ನೋಂದಣಿ ಸಂಖ್ಯೆಯ ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!