ಜನವರಿ 16ರಂದು ಹೂಡಿ ಜಂಕ್ಷನ್ ಬಳಿ ಕಾರೊಂದನ್ನು ಅಡ್ಡಗಟ್ಟಿ ಮಹಿಳೆಯರು ಮತ್ತು ಮಕ್ಕಳ ಮುಂದೆ ಚಾಕು ಪ್ರದರ್ಶಿಸಿ ಯುವಕನೊಬ್ಬ ಪುಂಡಾಟ ಮೆರೆದಿದ್ದ. ಇನ್ನು 25 ವರ್ಷದ ಆರ್.ಟಿ.ನಗರದ ಬಳಿಯ ಕನಕನಗರ ನಿವಾಸಿ ಮೀನು ಮಾರಾಟಗಾರ ಸೈಯದ್ ಅರ್ಬಾಜ್ ಖಾನ್ನನ್ನು ಪೊಲೀಸರು ಆತನ ವಾಹನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಆರೋಪಿ ಈ ಹಿಂದೆಯೂ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈತ ಸಂಜೆ ಕಾಡುಗೋಡಿ ಬಳಿ ಕಾರಿನಲ್ಲಿ ಹೋಗುತ್ತಿದ್ದ ದಂಪತಿಯ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದ. ನಂತರ ದಂಪತಿ ಟ್ರಾಫಿಕ್ ಸಿಗ್ನಲ್ನಲ್ಲಿ ಕಾರು ನಿಲ್ಲಿಸಿದ್ದಾಗ ಆರೋಪಿಯು ಬೈಕ್ನಿಂದ ಕೆಳಗಿಳಿದು ಬಂದು ನಡು ರಸ್ತೆಯಲ್ಲೆ ದಂಪತಿಯೊಂದಿಗೆ ಗಲಾಟೆ ಮಾಡಿದ್ದ. ಈ ವೇಳೆ ಅರ್ಬಾಜ್ ಖಾನ್, ದಂಪತಿಗೆ ಡ್ಯಾಗರ್ ತೋರಿಸಿ ಸ್ಥಳದಲ್ಲೆ ಅವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದು, ಅದರ ದೃಶ್ಯಾವಳಿಗಳು ದಂಪತಿಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಇದರ ಬೆನ್ನಲ್ಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೈಕ್ನ ನೋಂದಣಿ ಸಂಖ್ಯೆಯ ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…