ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಏರ್ಪೋರ್ಟ್ ನ ಪ್ರಯಾಣಿಕರಿಗೆ ಪ್ರಮುಖ ಸೂಚನೆ ನೀಡಿದೆ.
ಹೆಚ್ಚುವರಿ ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ದಟ್ಟಣೆ ನಿರೀಕ್ಷೆ ಹಿನ್ನೆಲೆ, ವಿಮಾನ ನಿಲ್ದಾಣಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಕೋರಲಾಗಿದೆ. ಚೆಕ್-ಇನ್ ಮತ್ತು ಭದ್ರತಾ ತಪಾಸಣೆಗಳಿಗೆ ಹೆಚ್ಚಿನ ಸಮಯ ಮೀಸಲಿಡಿ, ವಿಳಂಬ ತಪ್ಪಿಸಲು ಸಹಕರಿಸಿ ಎಂದು ಏರ್ಪೋರ್ಟ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್ಪೋರ್ಟ್ಗೆ ಬರುವ ಪ್ರತಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್, ಚೆಕ್ ಇನ್ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್ಎಫ್ ಸಿಬ್ಬಂದಿ ಕೈಗೊಂಡಿದ್ದು, ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಇದೆ. ಹೆಚ್ಚುವರಿ ಭದ್ರತಾ ಕ್ರಮಗಳ ಕಾರಣ ಪ್ರವೇಶ ದ್ವಾರಗಳು ಹಾಗೂ ಭದ್ರತಾ ತಪಾಸಣೆಯಲ್ಲಿ ಸಮಯ ಹೆಚ್ಚು ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕೊನೆ ಕ್ಷಣದ ವಿಳಂಬ ಅಥವಾ ವಿಮಾನ ತಪ್ಪುವ ಪರಿಸ್ಥಿತಿಯಿಂದ ದೂರ ಉಳಿಯಲು ತುಸು ಮೊದಲೇ ಆಗಮಿಸುವಂತೆ ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ಚೆಕ್-ಇನ್ ಸಮಯ ಮತ್ತು ಬೋರ್ಡಿಂಗ್ ವಿವರಗಳು ಸೇರಿದಂತೆ ವಿಮಾನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ತಮ್ಮ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಸಂಪರ್ಕಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…
ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…