ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಏರ್ಪೋರ್ಟ್ ನ ಪ್ರಯಾಣಿಕರಿಗೆ ಪ್ರಮುಖ ಸೂಚನೆ ನೀಡಿದೆ.
ಹೆಚ್ಚುವರಿ ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ದಟ್ಟಣೆ ನಿರೀಕ್ಷೆ ಹಿನ್ನೆಲೆ, ವಿಮಾನ ನಿಲ್ದಾಣಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಕೋರಲಾಗಿದೆ. ಚೆಕ್-ಇನ್ ಮತ್ತು ಭದ್ರತಾ ತಪಾಸಣೆಗಳಿಗೆ ಹೆಚ್ಚಿನ ಸಮಯ ಮೀಸಲಿಡಿ, ವಿಳಂಬ ತಪ್ಪಿಸಲು ಸಹಕರಿಸಿ ಎಂದು ಏರ್ಪೋರ್ಟ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್ಪೋರ್ಟ್ಗೆ ಬರುವ ಪ್ರತಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್, ಚೆಕ್ ಇನ್ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್ಎಫ್ ಸಿಬ್ಬಂದಿ ಕೈಗೊಂಡಿದ್ದು, ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಇದೆ. ಹೆಚ್ಚುವರಿ ಭದ್ರತಾ ಕ್ರಮಗಳ ಕಾರಣ ಪ್ರವೇಶ ದ್ವಾರಗಳು ಹಾಗೂ ಭದ್ರತಾ ತಪಾಸಣೆಯಲ್ಲಿ ಸಮಯ ಹೆಚ್ಚು ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕೊನೆ ಕ್ಷಣದ ವಿಳಂಬ ಅಥವಾ ವಿಮಾನ ತಪ್ಪುವ ಪರಿಸ್ಥಿತಿಯಿಂದ ದೂರ ಉಳಿಯಲು ತುಸು ಮೊದಲೇ ಆಗಮಿಸುವಂತೆ ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ಚೆಕ್-ಇನ್ ಸಮಯ ಮತ್ತು ಬೋರ್ಡಿಂಗ್ ವಿವರಗಳು ಸೇರಿದಂತೆ ವಿಮಾನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ತಮ್ಮ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಸಂಪರ್ಕಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…