ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಇದರಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲ್ಲೂರಿನಿಂದ ಹೈದರಾಬಾದ್ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ನಸುಕಿನ ಜಾವ ಸುಮಾರು 1:30 ರ ಸುಮಾರಿಗೆ ನಂದ್ಯಾಲ ತಲುಪಿದಾಗ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನ ಬಲಗಡೆಯ ಟೈರ್ ಇದ್ದಕ್ಕಿದ್ದಂತೆ ಸಿಡಿದಿದ್ದೇ ದುರಂತಕ್ಕೆ ಕಾರಣವಾಗಿದೆ.
ಟೈರ್ ಸಿಡಿದ ವೇಗಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಮೋಟಾರ್ ಸೈಕಲ್ಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಮತ್ತು ಲಾರಿ ಎರಡರಲ್ಲೂ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಬಸ್ ಚಾಲಕ, ಲಾರಿ ಚಾಲಕ ಮತ್ತು ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…