ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ: ಮಕ್ಕಳಾಗದ ಕಾರಣ ಕಿರುಕುಳ; ಪತ್ನಿಯನ್ನು ಕೊಂದ ಕಿರಾತಕ ಗಂಡ!

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.

21 ವರ್ಷದ ಪತ್ನಿ ರಾಜೇಶ್ವರಿಯನ್ನು ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಮಾಡಿದ್ದಾನೆ. ಬಳಿಕ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಎನ್ನಲಾಗಿದೆ. ಮದುವೆಯಾಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಹೆಂಡತಿ ಕಾಟ ಕೊಡುತ್ತಿದ್ದಳು. ಕಿರಿಕಿರಿಗೆ ಬೇಸತ್ತಿದ್ದ ಪತಿ ಸಿಟ್ಟಿಗೆದ್ದು ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದು, ಬಳಿಕ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂಬುದಾಗಿ ಸಂಬAಧಿಕರೆಲ್ಲರಿಗೂ ಫೋನ್ ಮಾಡಿ ತಿಳಿಸಿದ್ದಾನೆ. ಅಂತ್ಯಕ್ರಿಯೆಗೆ ಬಂದ ಪೋಷಕರಿಗೆ ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನ ವ್ಯಕ್ತವಾಗಿದೆ. ಕೂಡಲೇ ಪೋಷಕರು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕೊಲೆ ಎಂಬುದು ದೃಢವಾಗಿದೆ. ಕೂಡಲೇ ಪೊಲೀಸರು ಆರೋಪಿ ಫಕೀರಪ್ಪ ಗಿಲಕ್ಕನವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಕೊಲೆಗೈದಿರುವುದಾಗಿ ಆರೋಪಿ ತಪ್ರೊಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.

 

 

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!