ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.
21 ವರ್ಷದ ಪತ್ನಿ ರಾಜೇಶ್ವರಿಯನ್ನು ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಮಾಡಿದ್ದಾನೆ. ಬಳಿಕ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಎನ್ನಲಾಗಿದೆ. ಮದುವೆಯಾಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಹೆಂಡತಿ ಕಾಟ ಕೊಡುತ್ತಿದ್ದಳು. ಕಿರಿಕಿರಿಗೆ ಬೇಸತ್ತಿದ್ದ ಪತಿ ಸಿಟ್ಟಿಗೆದ್ದು ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದು, ಬಳಿಕ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆ ಎಂಬುದಾಗಿ ಸಂಬAಧಿಕರೆಲ್ಲರಿಗೂ ಫೋನ್ ಮಾಡಿ ತಿಳಿಸಿದ್ದಾನೆ. ಅಂತ್ಯಕ್ರಿಯೆಗೆ ಬಂದ ಪೋಷಕರಿಗೆ ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನ ವ್ಯಕ್ತವಾಗಿದೆ. ಕೂಡಲೇ ಪೋಷಕರು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕೊಲೆ ಎಂಬುದು ದೃಢವಾಗಿದೆ. ಕೂಡಲೇ ಪೊಲೀಸರು ಆರೋಪಿ ಫಕೀರಪ್ಪ ಗಿಲಕ್ಕನವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಕೊಲೆಗೈದಿರುವುದಾಗಿ ಆರೋಪಿ ತಪ್ರೊಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…