ಸಾರಿಗೆ ಬಸ್ನ ಚಕ್ರದ ಅಡಿಗೆ ಸಿಲುಕಿ ನಾಲ್ಕು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಜ.22ರಂದು ನಡೆದಿದೆ.

ಗಬ್ಬೂರು ಗ್ರಾಮದ ವಿದ್ಯಾಶ್ರೀ(4) ಮೃತ ಪಟ್ಟ ಮಗು. ಗಬ್ಬೂರಿನಿಂದ ಮದರಕಲ್ಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಚಕ್ರದಡಿಗೆ ಸಿಲುಕಿ ಮಗು ಮೃತಪಟ್ಟಿದೆ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಗಬ್ಬೂರು ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.



