ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆಯೋರ್ವರು ಗಂಭೀರ ಗಾಯಗಳೊಂದಿಗೆ ಹೆದ್ದಾರಿ ಬದಿ ಬಿದ್ದಿರುವುದನ್ನು ಕಂಡ ಸಮಾಜ ಸೇವಕ ಕಟಪಾಡಿ ಅಭಿರಾಜ್ ಸುವರ್ಣ ಅವರು ತನ್ನ ಕಾರ್ ನಲ್ಲಿ ಚಿಕಿತ್ಸೆಗೆ ತುರ್ತಾಗಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನು ಮೆರೆದ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.
ಅಂಡರ್ ಪಾಸ್ ಕಾಮಗಾರಿ ನಿರತ ಕಟಪಾಡಿಯ ಬಸ್ ತಂಗುದಾಣದಲ್ಲಿ ಕಟಪಾಡಿ ಮೂಡಬೆಟ್ಟು ಕುದ್ರಾಡಿ ಎಂಬಲ್ಲಿನ ಚಿಕ್ಕ ಪೂಜಾರ್ತಿ (50) ಎಂಬವರು ಉಡುಪಿಯತ್ತ ತೆರಳಲು ಎಕ್ಸ್ ಪ್ರೆಸ್ ಬಸ್ ಹತ್ತಿದ್ದರು. ಬಸ್ ಚಲಿಸುತ್ತಿದ್ದಂತೆಯೇ ಕೆಲವೇ ಕ್ಷಣಗಳಲ್ಲಿ ತಿರುವಿನಲ್ಲಿ ಈಕೆ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಇದೇ ಹಾದಿಯಾಗಿ ತೆರಳುತ್ತಿದ್ದ ಅಭಿರಾಜ್ ಸುವರ್ಣ ಈಕೆಯನ್ನು ಚಿಕಿತ್ಸೆಗೆ ಕರೆದೊಯ್ಯಲು ಯಾವುದೇ ವಾಹನಗಳ ಲಭ್ಯವಿಲ್ಲದುದನ್ನು ಗಮನಿಸಿ, ಮತ್ತು ತುರ್ತು ಚಿಕಿತ್ಸೆಯ ಅಗತ್ಯತೆಯನ್ನು ಮನಗಂಡು ತನ್ನ ಕಾರ್ ಮೂಲಕ ಉಡುಪಿಯ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು ಐಸಿಯು ವಿನಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…