ಜನವರಿ 26ರಂದು ರಾತ್ರಿ ಉಡುಪಿಯ ಕಲ್ಸಂಕದಲ್ಲಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಅವಿನಾಶ್ ರಾವ್ ಮೃತಪಟ್ಟಿದ್ದಾರೆ.
ಅವಿನಾಶ್ ರಾವ್ ಪಣಿಯೂರು ಮೂಲದವರಾಗಿದ್ದು ಬಿ.ಬಿ.ಎಂ. ವ್ಯಾಸಂಗ ಮಾಡುತ್ತಿದ್ದರು. ಇನ್ನು ಅವರು ನಿನ್ನೆ ಬೀಚಿಗೆ ತೆರಳಿ ಸ್ಕೂಟರಿನಲ್ಲಿ ಮರಳಿ ಮಣಿಪಾಲಕ್ಕೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಸ್ಕೂಟರ್ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಹೋಗುತ್ತಿದ್ದ ಕಂಟೈನರ್ ಚಕ್ರದ ಅಡಿಗೆ ಸಿಲುಕಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಅಪಘಾತದಲ್ಲಿ ಸ್ಕೂಟರ್ ಸವಾರನ ದೇಹ ಛಿದ್ರಗೊಂಡಿತ್ತು. ಇನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಪೊಲೀಸರ ಸಮಕ್ಷಮ ಮೃತ ದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಮರಣೋತ್ತರ ವಿಭಾಗಕ್ಕೆ ಸಾಗಿಸಿದ್ದಾರೆ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…