ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆ.ಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.
ಕೆಸಿನಗರ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿ ಅಲ್ ಕೋಬಾರ್ ನಲ್ಲಿ ಉದ್ಯೋಗದಲ್ಲಿ ಇದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ ಝೀನತ್ ಪುತ್ರ ಇಝಾಮ್ ಹಾಗೂ ಪುತ್ರಿ ಸಫಾ ಈ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಸೌದಿಗೆ ಹೋಗಿದ್ದರು.
ಇದರ ಬಳಿಕ ಅಬೂಬಕ್ಕರ್ ಅವರ ಸಹೋದರ ನ ಪತ್ನಿ ಮೈನಾಝ್ ಇಂದು ಮನೆ ನೋಡಿ ಸ್ವಚ್ಛ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಕಳ್ಳರು ಕೆಳ ಮಹಡಿಯಲ್ಲಿರುವ ಮೂರು ಕೊಠಡಿಗಳು ಹಾಗೂ ಮೊದಲ ಮಹಡಿಯಲ್ಲಿ ಇರುವ ಒಂದು ಕೊಠಡಿಯಲ್ಲಿರುವ ಒಟ್ಟು ನಾಲ್ಕು ಕಪಾಟುಗಳನ್ನು ಒಡೆದು ಜಾಲಾಡಿದ್ದಾರೆ. ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅಲ್ಲದೇ ಅಡುಗೆ ಕೋಣೆಯ ಕಪಾಟುಗಳನ್ನು ಜಾಲಾಡಿದ ಕಳ್ಳರಿಗೆ ಚಿನ್ನಾಭರಣ ಸಿಕ್ಕಿಲ್ಲ.
ಈ ಹಿನ್ನೆಲೆಯಲ್ಲಿ ಕಳ್ಳರು ಕಪಾಟಿನಲ್ಲಿದ್ದ ಬೆಲೆ ಬಾಳುವ ವಾಚ್, ಮೊಬೈಲ್ ಕಳವುಗೈದಿದ್ದಾರೆ. ಈ ಮನೆಯ ಕುಟುಂಬ ವಿದೇಶಕ್ಕೆ ಹೋಗುವ ಮೊದಲೇ ಚಿನ್ನಾಭರಣಗಳನ್ನು ಸೇಫ್ ಲಾಕರ್ನಲ್ಲಿ ಇಟ್ಟು ಹೋಗಿದ್ದರು ಎಂದು ಅಬೂಬಕ್ಕರ್ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಕಳವುಗೈದ ಆರೋಪಿಗಳು ಚಿನ್ನಾಭರಣ ದೋಚಲು ಬಂದಿದ್ದು, ಚಿನ್ನಾಭರಣ ಸಿಗದ ಕಾರಣ ಮೊಬೈಲ್, ವಾಚ್ ಕಳವುಗೈದಿರಬೇಕು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅಬೂಬಕ್ಕರ್ ಅವರ ಬಾವ ಶೇಖಬ್ಬ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…