ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆ.ಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.
ಕೆಸಿನಗರ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿ ಅಲ್ ಕೋಬಾರ್ ನಲ್ಲಿ ಉದ್ಯೋಗದಲ್ಲಿ ಇದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ ಝೀನತ್ ಪುತ್ರ ಇಝಾಮ್ ಹಾಗೂ ಪುತ್ರಿ ಸಫಾ ಈ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಸೌದಿಗೆ ಹೋಗಿದ್ದರು.
ಇದರ ಬಳಿಕ ಅಬೂಬಕ್ಕರ್ ಅವರ ಸಹೋದರ ನ ಪತ್ನಿ ಮೈನಾಝ್ ಇಂದು ಮನೆ ನೋಡಿ ಸ್ವಚ್ಛ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಕಳ್ಳರು ಕೆಳ ಮಹಡಿಯಲ್ಲಿರುವ ಮೂರು ಕೊಠಡಿಗಳು ಹಾಗೂ ಮೊದಲ ಮಹಡಿಯಲ್ಲಿ ಇರುವ ಒಂದು ಕೊಠಡಿಯಲ್ಲಿರುವ ಒಟ್ಟು ನಾಲ್ಕು ಕಪಾಟುಗಳನ್ನು ಒಡೆದು ಜಾಲಾಡಿದ್ದಾರೆ. ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅಲ್ಲದೇ ಅಡುಗೆ ಕೋಣೆಯ ಕಪಾಟುಗಳನ್ನು ಜಾಲಾಡಿದ ಕಳ್ಳರಿಗೆ ಚಿನ್ನಾಭರಣ ಸಿಕ್ಕಿಲ್ಲ.
ಈ ಹಿನ್ನೆಲೆಯಲ್ಲಿ ಕಳ್ಳರು ಕಪಾಟಿನಲ್ಲಿದ್ದ ಬೆಲೆ ಬಾಳುವ ವಾಚ್, ಮೊಬೈಲ್ ಕಳವುಗೈದಿದ್ದಾರೆ. ಈ ಮನೆಯ ಕುಟುಂಬ ವಿದೇಶಕ್ಕೆ ಹೋಗುವ ಮೊದಲೇ ಚಿನ್ನಾಭರಣಗಳನ್ನು ಸೇಫ್ ಲಾಕರ್ನಲ್ಲಿ ಇಟ್ಟು ಹೋಗಿದ್ದರು ಎಂದು ಅಬೂಬಕ್ಕರ್ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಕಳವುಗೈದ ಆರೋಪಿಗಳು ಚಿನ್ನಾಭರಣ ದೋಚಲು ಬಂದಿದ್ದು, ಚಿನ್ನಾಭರಣ ಸಿಗದ ಕಾರಣ ಮೊಬೈಲ್, ವಾಚ್ ಕಳವುಗೈದಿರಬೇಕು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅಬೂಬಕ್ಕರ್ ಅವರ ಬಾವ ಶೇಖಬ್ಬ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…