ಭಾರತೀಯ ನೇವಿ ಅಧೀನದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ ಮಂಗಳೂರಿನ ಲಿಶಾ ಡಿ.ಎಸ್ ಅವರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ನೀಡುವ ಪರಮೋಚ್ಚ ಪ್ರಶಸ್ತಿ ರಕ್ಷಾಮಂತ್ರಿ ಕಂಮಂಡೇಶ್ ಗೌರವ ಲಭಿಸಿದೆ.
ಜ.24ರಂದು ಹೊಸದಿಲ್ಲಿಯ ಡಿಸಿಎಂಸಿಸಿ ಕ್ಯಾಂಪಸ್ನಲ್ಲಿ ನಡೆದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಗೌರವ ಪ್ರಧಾನ ಮಾಡಿದರು. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸಿದ ಸಾಧನೆಗಳನ್ನು ಗುರುತಿಸಿ ಭಾರತೀಯ ನೇವಿ ಮೂಲಕ ಈ ಗೌರವವನ್ನು ನೀಡಲಾಗಿದೆ.
ಈ ವರೆಗೆ ರಕ್ಷಾಮಂತ್ರಿ ಕಂಮಂಡೇಶ್ ಗೌರವಕ್ಕೆ ಉತ್ತರ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲಬಾರಿಗೆ ದಕ್ಷಿಣಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ಗೆ ಈ ಗೌರವ ಲಭಿಸಿರುವುದು ವಿಶೇಷ.
ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿಗಳ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…