ಜನ ಮನದ ನಾಡಿ ಮಿಡಿತ

Advertisement

ಮುಂಬೈ: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ!

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಜ. 28ರಂದು(ಇಂದು) ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.

ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸ್ಪಷ್ಟಪಡಿಸಿದೆ.

ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ, ಪ್ರಚಾರಕ್ಕಾಗಿ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ರಾಜಕೀಯ ಗಣ್ಯರು ಈ ಬಗ್ಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಜೊತೆಗೆ ವಿಮಾನದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು ಘಟನಾ ಸ್ಥಳದಿಂದ ಆರು ಮೃತದೇಹ ಹೊರತೆಗೆದು ಸದ್ಯ ಆಸ್ಪತ್ರೆಗೆ ರವಾನಿಸಿದ್ದೇವೆ. ಆರಂಭದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದವು, ನಂತರ ಉಳಿದವುಗಳನ್ನು ಹೊರತೆಗೆಯಲಾಯಿತು ಎಂದು ಪುಣೆ ಪೊಲೀಸ್ ಅಧೀಕ್ಷಕ ಸಂದೀಪ್ ಗಿಲ್ ಮಾಹಿತಿ ನೀಡಿದ್ದಾರೆ. ವಿಮಾನವು ಬಾರಾಮತಿಯಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಪೈಲಟ್‌ನ ನಿಯಂತ್ರಣ ತಪ್ಪಿ ರನ್‌ವೇನಿಂದ ಪಕ್ಕಕ್ಕೆ ಜಾರಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!