ಬೆಂಗಳೂರು : ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ.
ನಿನ್ನೆ ತಡರಾತ್ರಿ ನಟ ಮಯೂರ್ ಪಟೇಲ್ ಕುಡಿದು ತಮ್ಮ ಫಾರ್ಚೂರ್ನರ್ ಕಾರನ್ನು ವೇಗವಾಗಿ ಚಲಾಯಿಸಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಈ ಸರಣಿ ಅಪಘಾತ ನಡೆದಿದೆ. ಮಯೂರ್ ಪಟೇಲ್ ವಿಪರೀತ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಅಭಿಷೇಕ್, ಶ್ರೀನಿವಾಸ್ ಎಂಬುವರ ಕಾರುಗಳಿಗೆ ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಆಗ ಅಲ್ಲೇ ಇದ್ದವರು ಕಂಟ್ರೋಲ್ ರೂಮ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ನಟ ಮಯೂರ್ ಪಟೇಲರನ್ನು ಠಾಣೆಗೆ ಕರೆದೊಯ್ದಿದ್ದಾರೆ.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…
ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…