ಜನ ಮನದ ನಾಡಿ ಮಿಡಿತ

Advertisement

ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳ ಬಂಧನ…!

ಮಂಗಳೂರು : ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ  ಪೂಜಾ ಪರಿಕರಗಳು ಇದ್ದವು. ಈ ಮನೆಯಲ್ಲಿ ಯಾರೂ ವಾಸವಿರದ ಕಾರಣ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕಲಾಗುತ್ತಿತ್ತು. ರಾತ್ರಿ ಸಮಯ ಯಾರೋ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು 1,00,000 ಮೌಲ್ಯದ 1 ಪಸಪ್ಪ ದೈವದ ತಾಮ್ರದ ಮೂರ್ತಿ, 1 ಮಂತ್ರದೇವತೆಯ ಬೆಳ್ಳಿಯ ಮೂರ್ತಿ, 1 ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ, 1 ಬೆಳ್ಳಿಯ ಕಡ್ಸಲೆ, 2ತಾಮ್ರದ ಘಂಟೆ, 4 ತಾಮ್ರದ ಚೆಂಬು ಹಾಗೂ 1 ಎಲ್.ಇ.ಡಿ ಟಿ.ವಿ ಕಳವು ಮಾಡಿದ ಬಗ್ಗೆ ದೂರು ದಾಖಲಾಗಿತ್ತು. ಸುರತ್ಕಲ್ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು, ತಾಂತ್ರಿಕ ವಿಧಾನಗಳನ್ನು ಪರಿಶೀಲನೆ ನಡೆಸಿದಾಗ ವಾಜೀದ್ ಜೆ ಅಲಿಯಾಸ್ ವಾಜಿ ಎಂಬಾತನ್ನು ದಸ್ತಗಿರಿ ಮಾಡಿ ವಿಚಾರಿಸಲಾಯ್ತು. ಈತನ ಹೇಳಿಕೆಯಂತೆ ಕೃತ್ಯ ಎಸಗಿದ್ದಾಗಿ ಹಾಗೂ ಮನೆಕಳ್ಳತನ ಮಾಡಿದ ಮಾಲಿನಲ್ಲಿ ಹಿತ್ತಾಳೆ ಹಾಗೂ ತಾಮ್ರದ ಸಾಮಾಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿದ್ದಾಗಿ ತಿಳಿಸಿದಂತೆ ಸಯ್ಯದ್ ಆಲಿ ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ ಮನೆಯಿಂದ ಕಳ್ಳತನವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!