ಉಡುಪಿ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್ನಲ್ಲಿ ನಡೆದಿದೆ.
ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಿಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಸ್ಸೆಸ್, ಸುಮಾರು 2.5 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲಸ್, 15 ಪವನ್ ತೂಕದ ಬಂಗಾರದ ಬಳೆಗಳು, 3 ಪವನ್ ತೂಕದ ಬಂಗಾರದ ಬ್ರೇಸ್ಟೇಟ್, 1 ಪವನ್ ತೂಕದ ಚಿನ್ನದ ಉಂಗುರ, 3 ಪವನ್ ತೂಕದ ಚಿನ್ನದ ಉಂಗುರಗಳು ಸಹಿತ ಮುತ್ತಿನ ಮಣಿಯ ಚಿನ್ನದ ಸರ, ಸಣ್ಣ ಚಿನ್ನದ ಸರಗಳು, ಕಿವಿಯೋಲೆ ಸೇರಿದಂತೆ ಒಟ್ಟು 70 ಪವನ್ ತೂಕದ 48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 50000 ರೂ. ಮೌಲ್ಯದ ರಾಡೋ ವಾಚನ್ನು ಕಳವುಗೈದಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…