ಕರಾವಳಿ

ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ -ಮಹಿಳಾ ವೈಭವ 2026…!

 

ಮಂಗಳೂರು:  ದೇಶದ 144 ಕೋಟಿ ಜನ ಸಂಖ್ಯೆಯ ಮಾನವ ಸಂಪತ್ತಿನಲ್ಲಿ ಬಹುತೇಕ ಮಹಿಳೆಯರು ಇದ್ದಾರೆ.

 

ಅವರು ಸಮಾಜದಲ್ಲಿ ದೊಡ್ಡ ಶಕ್ತಿಯಾಗಿದ್ದಾರೆ. ಅವರಿಗೆ ಸಮಾಜದಲ್ಲಿ ಅಪಾರ ಗೌರವವೂ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದ್ದಾರೆ.

ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಮಹಿಳಾ ಸಶಕ್ತಿಕರಣದ ಸಲುವಾಗಿ ನಗರದ ಪುರಭವನದಲ್ಲಿ ನಡೆದ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ -ಮಹಿಳಾ ವೈಭವ 2026-ರ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸ್ತ್ರಿಶಕ್ತಿ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷೆ ರೆಹನಾ ಸುಲ್ತಾನ್ ಎಂ.ಎಂ. ಮಾತ ನಾಡಿ ಜನರಿಗೆ ನೆರವಾಗಬೇಕೆನ್ನುವ ನಿಟ್ಟಿನಲ್ಲಿ ಸ್ತ್ರೀ ಶಕ್ತಿ ಸಂಘಗಳ ಮೂಲಕ ಸಮಾಜ ಸೇವೆಗೆ ಮುಂದಾಗಿದ್ದೇವೆ. ಇದನ್ನು ಜವಾಬ್ದಾರಿ ಎಂದು ಪರಿಗಣಿಸದೆ ಹವ್ಯಾಸವಾಗಿ ಬಳಸಿಕೊಳ್ಳಬೇಕು. ಅದರಿಂದ ಸಿಗುವ ಆತ್ಮತೃಪ್ತಿಗೆ ಮಿತಿ ಇಲ್ಲ ಎಂದರು.

ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳ ಮೂಲಕ ಒಟ್ಟಾಗಿ ಮುನ್ನಡೆದಲ್ಲಿ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಿದೆ ಎಂದರು.

ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ ಜಾಗೃತ ಹೆಣ್ಣು ಸಮಾಜದ ಕಣ್ಣಾಗಿದ್ದು, ಎಲ್ಲಾ ಮಹಿಳೆಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮಹಿಳಾ ಸಂಘಟನೆಗಳು ಸಮಾಜ ಸೇವೆಯ ಮೂಲಕ ನೊಂದವರ ಬಾಳಿಗೆ ಬೆಳಕಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯಾ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ, ಆದರೆ ರಾಜಕೀಯದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಅಪರೂಪಕ್ಕೆ ಎಂಬಂತೆ ಮಹಿಳೆಯರು ರಾಜಕೀಯದಲ್ಲಿ ಕಾಣುತ್ತಿದ್ದೇವೆ. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕು. ಅವರಲ್ಲಿರುವ ಪ್ರತಿಭೆಗಳಿಗೆ ವೇದಿಕೆ ಒದಗಿಸಬೇಕು ಎಂದರು.

ಪ್ರತೀ ಮಹಿಳೆಯರು ಹೊಸ ಅವಕಾಶಗಳನ್ನು ಸೃಷ್ಟಿಸಬೇಕು. ಇದಕ್ಕಾಗಿ ಮಹಿಳೆಯರು ತಮ್ಮ ಸಂಘಟನೆಗಳ ಮೂಲಕ ಬಲಗೊಳ್ಳಬೇಕು ಎಂದವರು ಹೇಳಿದರು.

ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಶಿಶು ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ , ಹಾಸನದ ಶೋಭಾ ರಾಣಿ, ಉಡುಪಿಯ ಶೋಭಾ, ವಸಂತಿ ರಾವ್ ಅನಿಸಿಕೆ ವ್ಯಕ್ತಪಡಿಸಿದರು. ಪ್ರಮುಖರಾದ ವಿಜಯಲಕ್ಷ್ಮಿ ಭಾರತಿ ಎಂ., ದೇವಕಿ ಅಚ್ಯುತ್ತ, ದಯಾಮಣಿ, ಸುನಿತಾ, ಗಾಯತ್ರಿ ಬಿ.ಎಸ್., ಶೈಲಾ ರಾವ್‌, ವಿಜಯಲಕ್ಷ್ಮಿ ಶೆಟ್ಟಿ, ಸುಕಾಲಾಕ್ಷಿ ಸುವರ್ಣ, ರೇಖಾ ಶೆಟ್ಟಿ, ಭಾರತಿ ಎಂ., ಅನುರಾಧ ರಾಜೀವ್, ಪ್ರೇಮಾ ಮಾಧವ್, ಲತಾ ಎಂ. ಶೆಟ್ಟಿ, ನಾಗವೇಣಿ, ಜ್ಯೋತಿ, ರಮಣಿ ಬೋಳೂರು, ರಮಣಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಒಕ್ಕೂಟದ ಉಪಾಧ್ಯಕ್ಷೆ ಮನೋರಮ ಉಮೇಶನ್ ಸ್ವಾಗತಿಸಿದರು. ಪ್ರಿಯಾ ಹರೀಶ್ ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago