ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕಲಾ ಸೇವೆಯಲ್ಲಿ ಅಪ್ರತಿಮ ಸಾಧನೆಗೈದು ಯಕ್ಷಗಾನ ಕಲೆಯ ಘನತೆಯನ್ನು ಪ್ರಪಂಚದಾದ್ಯಂತ ವಿಸ್ತರಿಸಿದ ಹಾಗೂ ತನ್ನ ವೈಯಕ್ತಿಕ ವರ್ಚಸ್ಸಿನ ಮೂಲಕ ಸಾವಿರಾರು ಕಲಾವಿದರ ಪಾಲಿಗೆ ಬೆಳಕಾದ ಪಟ್ಲರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಒಲಿದು ಬಂದಿದ್ದು ಸಂತೋಷದ ವಿಷಯವಾಗಿದೆ.



