ಕರಾವಳಿ

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ ಅವರಿಗೆ ದೆಹಲಿ ಕರ್ನಾಟಕ ಸಂಘದ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.


ಯುವ ತಲೆಮಾರಿನ ಅತ್ಯಂತ ಜನಪ್ರಿಯ ಭಾಗವತರಾಗಿರುವ ಪಟ್ಲ ಜೆನ್ ಜೀ ಯನ್ನು ಸಾಂಪ್ರದಾಯಿಕ ಕಲೆಯಾದ ಯಕ್ಷಗಾನದತ್ತ ಸೆಳೆದವರು. ಶಾಲೆಗಳಲ್ಲಿ ಯಕ್ಷ ಶಿಕ್ಷಣದ ಮೂಲಕ ಜೆನ್ ಆಲ್ಫಾದಲ್ಲಿಯೂ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸಿ ಅದರ ಪರಂಪರೆ, ಸಂಸ್ಕ್ರತಿಯ ಹರಿವನ್ನು ವಿಸ್ತಾರಗೊಳಿಸಿದವರು.

ಕೃತಕ ಬುದ್ದಿಮತ್ತೆ ಮಾನವ ಬದುಕನ್ನು ಮರು ರೂಪಿಸುತ್ತಿರುವ ಈ ಸಂಕ್ರಮಣ ಕಾಲಘಟ್ಟದಲ್ಲಿ ಭಾರತೀಯ ಪರಂಪರೆಯ ಭಾಗವೇ ಆಗಿರುವ ಯಕ್ಷಗಾನವನ್ನು ಕೃತಕ ಬುದ್ದಿಮತ್ತೆ ಅಭಿವೃದ್ದಿ ಹೊಂದುತ್ತಿರುವ ವಿದೇಶಗಳಲ್ಲಿ ಪ್ರದರ್ಶಿಸಿ ಭಾರತೀಯತೆಯನ್ನು ಮೆರೆದವರು. ಉನ್ನತ ಸ್ಥಾನ ಮಾನ, ಜನಪ್ರಿಯತೆಯ ಉತ್ತುಂಗ ಶಿಖರದಲ್ಲಿದ್ದರೂ ನಮೃತೆ ಮರೆಯದ, ವಿನಯವೇ ಭೂಷಣವಾಗಿರುವ ಪಟ್ಲ ಈ ಹಿಂದೆಯೂ ಹಲವು ಪ್ರಶಸ್ತಿ, ಗೌರವಗಳನ್ನು ಪಡೆದಿದ್ದಾರೆ. ಇತರರಿಗೂ ಗೌರವಗಳನ್ನು ಹಂಚಿದ್ದಾರೆ.

ಯಕ್ಷಗಾನವನ್ನು ಹೊಸ ರೂಪದಲ್ಲಿ ವಿದೇಶಗಳಿಗೆ ಕೊಂಡೊಯ್ದು ಅದಕ್ಕೊಂದು ವಿಶ್ವರೂಪತ್ವವನ್ನು ತಂದು ಕೊಟ್ಟ ಡಾ. ಶಿವರಾಮ ಕಾರಂತರ ಹೆಸರಿನ ಪ್ರಶಸ್ತಿ ಯಕ್ಷಗಾನದ ವಿಶ್ವರೂಪತ್ವವನ್ನು ಹೊಸ ತಲೆಮಾರಿಗೆ ವಿಸ್ತರಿಸಿದ ಪಟ್ಲರಿಗೆ ಸಂದಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ: ಹಂಪ ನಾಗರಾಜಯ್ಯ, ಪ್ರೊ. ಪ್ರಧಾನ ಗುರುದತ್ತ, ಬಿ ಆರ್ ಲಕ್ಷ್ಮಣರಾವ್, ಡಾ. ಲತಾ ರಾಜಶೇಖರ್, ಚಲನ ಚಿತ್ರ ನಿರ್ದೇಶಕ ಡಾ. ಟಿ.ಎಸ್. ನಾಗಾಭರಣ, ಚಲನಚಿತ್ರ ನಟ ಚರಣ್ ರಾಜ್ , ಸಂಪಾದಕ ವಿಶ್ವೇಶ್ವರ ಭಟ್, ಕರ್ನಾಟಕ ಸಂಘದ ಅಧ್ಯಕ್ಷ ಸಿ. ಯಂ. ನಾಗರಾಜ್, ಉಪಾಧ್ಯಕ್ಷ ಶ ವಸಂತ ಶೆಟ್ಟಿ ಬೆಳ್ಳಾರೆ, ಉಪಾಧ್ಯಕ್ಷೆ ಶ್ರೀಮತಿ ಪೂಜಾ ರಾವ್ ,ಕಾರ್ಯದರ್ಶಿ ರಾಧಾಕೃಷ್ಣ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

5 hours ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

2 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

2 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

2 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

3 days ago

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…

3 days ago