ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!
ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ ಅವರಿಗೆ ದೆಹಲಿ ಕರ್ನಾಟಕ ಸಂಘದ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಯುವ ತಲೆಮಾರಿನ ಅತ್ಯಂತ ಜನಪ್ರಿಯ ಭಾಗವತರಾಗಿರುವ ಪಟ್ಲ ಜೆನ್ ಜೀ ಯನ್ನು ಸಾಂಪ್ರದಾಯಿಕ ಕಲೆಯಾದ ಯಕ್ಷಗಾನದತ್ತ ಸೆಳೆದವರು. ಶಾಲೆಗಳಲ್ಲಿ ಯಕ್ಷ ಶಿಕ್ಷಣದ ಮೂಲಕ ಜೆನ್ ಆಲ್ಫಾದಲ್ಲಿಯೂ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸಿ ಅದರ ಪರಂಪರೆ, ಸಂಸ್ಕ್ರತಿಯ ಹರಿವನ್ನು ವಿಸ್ತಾರಗೊಳಿಸಿದವರು.
ಕೃತಕ ಬುದ್ದಿಮತ್ತೆ ಮಾನವ ಬದುಕನ್ನು ಮರು ರೂಪಿಸುತ್ತಿರುವ ಈ ಸಂಕ್ರಮಣ ಕಾಲಘಟ್ಟದಲ್ಲಿ ಭಾರತೀಯ ಪರಂಪರೆಯ ಭಾಗವೇ ಆಗಿರುವ ಯಕ್ಷಗಾನವನ್ನು ಕೃತಕ ಬುದ್ದಿಮತ್ತೆ ಅಭಿವೃದ್ದಿ ಹೊಂದುತ್ತಿರುವ ವಿದೇಶಗಳಲ್ಲಿ ಪ್ರದರ್ಶಿಸಿ ಭಾರತೀಯತೆಯನ್ನು ಮೆರೆದವರು. ಉನ್ನತ ಸ್ಥಾನ ಮಾನ, ಜನಪ್ರಿಯತೆಯ ಉತ್ತುಂಗ ಶಿಖರದಲ್ಲಿದ್ದರೂ ನಮೃತೆ ಮರೆಯದ, ವಿನಯವೇ ಭೂಷಣವಾಗಿರುವ ಪಟ್ಲ ಈ ಹಿಂದೆಯೂ ಹಲವು ಪ್ರಶಸ್ತಿ, ಗೌರವಗಳನ್ನು ಪಡೆದಿದ್ದಾರೆ. ಇತರರಿಗೂ ಗೌರವಗಳನ್ನು ಹಂಚಿದ್ದಾರೆ.
ಯಕ್ಷಗಾನವನ್ನು ಹೊಸ ರೂಪದಲ್ಲಿ ವಿದೇಶಗಳಿಗೆ ಕೊಂಡೊಯ್ದು ಅದಕ್ಕೊಂದು ವಿಶ್ವರೂಪತ್ವವನ್ನು ತಂದು ಕೊಟ್ಟ ಡಾ. ಶಿವರಾಮ ಕಾರಂತರ ಹೆಸರಿನ ಪ್ರಶಸ್ತಿ ಯಕ್ಷಗಾನದ ವಿಶ್ವರೂಪತ್ವವನ್ನು ಹೊಸ ತಲೆಮಾರಿಗೆ ವಿಸ್ತರಿಸಿದ ಪಟ್ಲರಿಗೆ ಸಂದಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ: ಹಂಪ ನಾಗರಾಜಯ್ಯ, ಪ್ರೊ. ಪ್ರಧಾನ ಗುರುದತ್ತ, ಬಿ ಆರ್ ಲಕ್ಷ್ಮಣರಾವ್, ಡಾ. ಲತಾ ರಾಜಶೇಖರ್, ಚಲನ ಚಿತ್ರ ನಿರ್ದೇಶಕ ಡಾ. ಟಿ.ಎಸ್. ನಾಗಾಭರಣ, ಚಲನಚಿತ್ರ ನಟ ಚರಣ್ ರಾಜ್ , ಸಂಪಾದಕ ವಿಶ್ವೇಶ್ವರ ಭಟ್, ಕರ್ನಾಟಕ ಸಂಘದ ಅಧ್ಯಕ್ಷ ಸಿ. ಯಂ. ನಾಗರಾಜ್, ಉಪಾಧ್ಯಕ್ಷ ಶ ವಸಂತ ಶೆಟ್ಟಿ ಬೆಳ್ಳಾರೆ, ಉಪಾಧ್ಯಕ್ಷೆ ಶ್ರೀಮತಿ ಪೂಜಾ ರಾವ್ ,ಕಾರ್ಯದರ್ಶಿ ರಾಧಾಕೃಷ್ಣ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…