ಜನ ಮನದ ನಾಡಿ ಮಿಡಿತ

Advertisement

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಮಂಗಳೂರು

ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.

ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ ಹೋದ ಕೊಂಡೂ ಹೋದ ಕುಖ್ಯಾತಿ ಕಾವೂರ ಈ ಪೋರನದ್ದಾಗಿದೆ.

ಕಾವೂರು ಮೂಲದ ನಿವಾಸಿ ಯುವಕ ಮ್ಯಾಟ್ರಿಮನಿ ಸೈಟ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಮದುವೆಯಾಗುತ್ತೇನೆಂದು ನಂಬಿಸಿ ಮುಂಬೈ, ಉಡುಪಿ ಹೀಗೆ ಹಲವೆಡೆ ಯುವತಿಯರನ್ನು ಮದುವೆಯಾಗಿ ಅವರಿಂದ ಹಣ ಪಡೆದು ವಂಚಿಸಿದ್ದ, ಇನ್ನೂ ಹಲವು ಯುವತಿಯರನ್ನು ಮದುವೆಯಾಗುವ ಭರವಸೆ ನೀಡಿ ಹಣ ಪಡೆದು ಮೋಸಗೈಯುತ್ತಿದ್ದ. ಅಂತಿಮವಾಗಿ ಆತ ಕಾವೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಶಾಂತ್ ಪೂಜಾರಿ ಅಲಿಯಾಸ್ ಸುಶಾಂತ್ ಅಂಕುಶ್ ಪೂಜಾರಿ, ಸುಶಾಂತ್ ಜಿ. ಕರ್ಕೇರಾ ಎಂದು ಕರೆಸಿಕೊಳ್ಳುತ್ತಿದ್ದ ಈ ಯುವಕನ ವಂಚನಾ ಪ್ರಕರಣಗಳು ಈಗ ಒಂದೊಂದಾಗಿ ಹೊರಬರುತ್ತಿವೆ. ಈತನನ್ನು ಮತ್ತು ಈತನಿಗೆ ಮುಂಬೈಯಲ್ಲಿ ಮದುವೆಯಾಗಲು ಸಹಕರಿಸಿದ್ದ ಮುಲ್ಕಿ ನಿವಾಸಿ ಭಾಸ್ಕರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ಮಹಿಳೆಗೆ ಸುಶಾಂತ್ ಪೂಜಾರಿ ಮ್ಯಾಟ್ರಿಮೊನಿ ಸೈಟ್ ಮೂಲಕ ಪರಿಚಯವಾಗಿದ್ದು ನವ ಮುಂಬೈ ನಲ್ಲಿ 2025ರ ಫೆ.2ರಂದು ಆಕೆಯನ್ನು ಮದುವೆಯಾಗಿದ್ದ. ಆನಂತರ, ಹಂತ ಹಂತವಾಗಿ 6,60,000 ರೂ. ಹಣವನ್ನು ಪಡೆದು ಕಳೆದ ನವೆಂಬರ್ 15ರಂದು ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿ ಮಹಿಳೆ ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಹಲವಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರನ್ನು ಮೋಸ ಮಾಡಿರುವ ವಿಷಯ ತಿಳಿದುಬಂತು. ಅಲ್ಲದೆ, ಈತನಿಗೆ ಈ ಮೊದಲು ಒಂದು ಮದುವೆ ಆಗಿರುವ ವಿಚಾರವೂ ತಿಳಿದ ಮೇರೆಗೆ ನೊಂದ ಮುಂಬೈ ಮೂಲದ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದರು. ರೋಪಿ ಸುಶಾಂತ್ ಪೂಜಾರಿಯನ್ನು ಫೆ.05ರಂದು ಪತ್ತೆಹಚ್ಚಿ ದಸ್ತಗಿರಿ ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!