ಮಂಗಳೂರು
ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ ಹೋದ ಕೊಂಡೂ ಹೋದ ಕುಖ್ಯಾತಿ ಕಾವೂರ ಈ ಪೋರನದ್ದಾಗಿದೆ.
ಕಾವೂರು ಮೂಲದ ನಿವಾಸಿ ಯುವಕ ಮ್ಯಾಟ್ರಿಮನಿ ಸೈಟ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಮದುವೆಯಾಗುತ್ತೇನೆಂದು ನಂಬಿಸಿ ಮುಂಬೈ, ಉಡುಪಿ ಹೀಗೆ ಹಲವೆಡೆ ಯುವತಿಯರನ್ನು ಮದುವೆಯಾಗಿ ಅವರಿಂದ ಹಣ ಪಡೆದು ವಂಚಿಸಿದ್ದ, ಇನ್ನೂ ಹಲವು ಯುವತಿಯರನ್ನು ಮದುವೆಯಾಗುವ ಭರವಸೆ ನೀಡಿ ಹಣ ಪಡೆದು ಮೋಸಗೈಯುತ್ತಿದ್ದ. ಅಂತಿಮವಾಗಿ ಆತ ಕಾವೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಶಾಂತ್ ಪೂಜಾರಿ ಅಲಿಯಾಸ್ ಸುಶಾಂತ್ ಅಂಕುಶ್ ಪೂಜಾರಿ, ಸುಶಾಂತ್ ಜಿ. ಕರ್ಕೇರಾ ಎಂದು ಕರೆಸಿಕೊಳ್ಳುತ್ತಿದ್ದ ಈ ಯುವಕನ ವಂಚನಾ ಪ್ರಕರಣಗಳು ಈಗ ಒಂದೊಂದಾಗಿ ಹೊರಬರುತ್ತಿವೆ. ಈತನನ್ನು ಮತ್ತು ಈತನಿಗೆ ಮುಂಬೈಯಲ್ಲಿ ಮದುವೆಯಾಗಲು ಸಹಕರಿಸಿದ್ದ ಮುಲ್ಕಿ ನಿವಾಸಿ ಭಾಸ್ಕರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ಮಹಿಳೆಗೆ ಸುಶಾಂತ್ ಪೂಜಾರಿ ಮ್ಯಾಟ್ರಿಮೊನಿ ಸೈಟ್ ಮೂಲಕ ಪರಿಚಯವಾಗಿದ್ದು ನವ ಮುಂಬೈ ನಲ್ಲಿ 2025ರ ಫೆ.2ರಂದು ಆಕೆಯನ್ನು ಮದುವೆಯಾಗಿದ್ದ. ಆನಂತರ, ಹಂತ ಹಂತವಾಗಿ 6,60,000 ರೂ. ಹಣವನ್ನು ಪಡೆದು ಕಳೆದ ನವೆಂಬರ್ 15ರಂದು ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿ ಮಹಿಳೆ ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಹಲವಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರನ್ನು ಮೋಸ ಮಾಡಿರುವ ವಿಷಯ ತಿಳಿದುಬಂತು. ಅಲ್ಲದೆ, ಈತನಿಗೆ ಈ ಮೊದಲು ಒಂದು ಮದುವೆ ಆಗಿರುವ ವಿಚಾರವೂ ತಿಳಿದ ಮೇರೆಗೆ ನೊಂದ ಮುಂಬೈ ಮೂಲದ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದರು. ರೋಪಿ ಸುಶಾಂತ್ ಪೂಜಾರಿಯನ್ನು ಫೆ.05ರಂದು ಪತ್ತೆಹಚ್ಚಿ ದಸ್ತಗಿರಿ ಮಾಡಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…