ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಪ್ರಯಾಣಿಕನಾಗಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಪ್ರಕಾಶ್ ಡೋಂಗ್ರಾ ಎಂಬಾತನ ಬಳಿಯಲ್ಲಿ ಗಾಂಜಾ ಪತ್ತೆಯಾಗಿದೆ. 13 ಪ್ಯಾಕೆಟ್ಗಳಲ್ಲಿ ಟ್ರಾಲಿ ಬ್ಯಾಗ್ನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ತಪಾಸಣೆ ಸಂದರ್ಭದಲ್ಲಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮಂಜೇಶ್ವರ ಎಕ್ಸೈಸ್ ಚೆಕ್ಪೋಸ್ಟ್ನ ಎಕ್ಸೈಸ್ ಸರ್ಕಲ್ ಇನ್ಸ್ಪೆಕ್ಟರ್ ಕೆ.ಕೆ. ಶಿಜಿಲ್ ಕುಮಾರ್ ಹಾಗೂ ಅವರ ತಂಡ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಪಾಸಣೆ ಕಾರ್ಯಾಚರಣೆಯಲ್ಲಿ ಎಕ್ಸೈಸ್ ಇನ್ಸ್ಪೆಕ್ಟರ್ ಆದರ್ಶ್ ಜಿ, ಸಹಾಯಕ ಎಕ್ಸೈಸ್ ಇನ್ಸ್ಪೆಕ್ಟರ್ಗಳಾದ ಶ್ರೀನಿವಾಸನ್ ಪತ್ತಿಲ್, ಪ್ರಮೋದ್ ಕುಮಾರ್ ಹಾಗೂ ಪ್ರಿವೆಂಟಿವ್ ಅಧಿಕಾರಿ ಪ್ರಜಿತ್ ಕುಮಾರ್, ಮಧು ಸೇರಿದಂತೆ ಇತರರು ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಮುಂದಿನ ತನಿಖೆ ಮುಂದುವರಿದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…