ಜನ ಮನದ ನಾಡಿ ಮಿಡಿತ

Advertisement

ತಿರುವನಂತಪುರ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ!

ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ.

ಕಾರು ಅಪಘಾತದಲ್ಲಿ ಅಲಿನ್ ಎಂಬ ಮಗುವಿನ ಮೆದುಳು ನಿಷ್ಕ್ರಿಯವಾಗಿತ್ತು. ಈ ಮೂಲಕ ಅಲಿನ್ ಶೆರಿನ್ ಅಬ್ರಹಾಂ ಎಂಬ 10 ತಿಂಗಳ ಹಸುಗೂಸು ದೇಶದ ಅತಿ ಕಿರಿಯ ಅಂಗಾಂಗ ದಾನಿ ಎನಿಸಿಕೊಂಡಿದೆ. ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಅಲಿನ್ ಶೆರಿನ್ ಅಬ್ರಹಾಂ ಎನ್ನುವ ಮಗು ತಂದೆ-ತಾಯಿ ಜತೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು. ಆದರೆ ಹೆತ್ತ ಮಗುವನ್ನು ಕಳೆದುಕೊಂಡ ದುಃಖದಲ್ಲಿಯೂ ಪಾಲಕರು ಮಗುವಿನ ಮೂತ್ರಪಿಂಡ, ಯಕೃತ್ತು, ಹೃದಯ ಕವಾಟುಗಳನ್ನು ದಾನ ಮಾಡಿದ್ದಾರೆ.

ಈ ಪೈಕಿ ಮೂತ್ರಪಿಂಡವನ್ನು ತಿರುವನಂತಪುರಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ವರ್ಷದ ಬಾಲಕಿಗೆ ಕಸಿ ಮಾಡಲಾಗಿದೆ. ಈ ಮಾಹಿತಿಯನ್ನು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಜಾಲತಾಣದಲ್ಲಿ ಹಂಚಿಕೊಂಡು ಮಗುವಿನ ಹೆತ್ತವರಿಗೆ ಧನ್ಯವಾದ ತಿಳಿಸಿದ್ದಾರೆ. ಅಂಗಾಂಗ ದಾನದಲ್ಲಿ ಹೊಸ ಇತಿಹಾಸ ಇದಾಗಿದ್ದು, 10 ತಿಂಗಳ ಮಗುವಿನ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಅಲಿನ್ ಶೆರಿನ್ ಅಬ್ರಹಾಂ ಹೆಸರಿನ ಹೆಣ್ಣುಮಗುವಿನ ಮೂತ್ರಪಿಂಡಗಳು, ಯಕೃತ್ತು ಮತ್ತು ಹೃದಯ ಕವಾಟಗಳನ್ನು ಮಹಾದಾನ ಮಾಡಲಾಗಿದೆ. ಈ ಅಂಗಾಂಗವನ್ನು ಕೊಚ್ಚಿಯಿಂದ ರಸ್ತೆ ಮೂಲಕ ತಿರುವನಂತಪುರಂಗೆ ಅದನ್ನು ತೆಗೆದುಕೊಂಡುಹೋಗಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!