ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರು ನಿವಾಸಿ ವಿಶಾಲಾಕ್ಷಿ ಮೃತಪಟ್ಟ ಮಹಿಳೆ.
ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ. ಮಂಗಳೂರು ಕಡೆಯಿಂದ ಬರುತ್ತಿರುವ ವೇಳೆ ಕಡೆಗೋಳಿ ಜಂಕ್ಷನ್ನಲ್ಲಿ ಬೈಕ್ ಸವಾರನೋರ್ವ ಎದುರು ಕಡೆಗೆ ಕ್ರಾಸ್ ಆಗಿದ್ದು, ರಿಕ್ಷಾ ಬೈಕ್ಗೆ ಡಿಕ್ಕಿಯಾಗಿದೆ, ಬಳಿಕ ನಿಯಂತ್ರಣ ಕಳೆದ ರಿಕ್ಷಾ ಎದರು ಭಾಗದಲ್ಲಿ ನಿಂತಿದ್ದ ಮತ್ತೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ರಿಕ್ಷಾದಲ್ಲಿ ಮೃತ ವಿಶಾಲಾಕ್ಷಿ ಅವರ ತಂಗಿ ಹಾಗೂ ಅವರ ಇಬ್ಬರು ಮಕ್ಕಳು ಕೂಡ ಪ್ರಯಾಣಿಸುತ್ತಿದ್ದರು. ಆದರೆ ಚಾಲಕ ಸಹಿತ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…