ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ:ಗ್ರಾಮೀಣ ಭಾಗದಲ್ಲಿ ಕನ್ನಡದ ಮನಸ್ಸು ಕ್ರಿಯಾಶೀಲ- ಮೋಹನ್ ಆಳ್ವ

ಮುಲ್ಕಿ: ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡದ ಮತ್ತು ಸಾಹಿತ್ಯದ ಕೆಲಸಗಳು ನಡೆಯುತ್ತಲೇ ಇರುತ್ತವೆ. ಆ ಮೂಲಕ ಕನ್ನಡದ ಮನಸ್ಸು ಕ್ರಿಯಾಶೀಲವಾಗಿರುತ್ತದೆ ಎಂದು ಮೂಡುಬಿದ್ರೆ ಡಾ. ಮೋಹನ ಆಳ್ವ ಹೇಳಿದರು.

ಅವರು ಶುಕ್ರವಾರ ಕಿನ್ನಿಗೋಳಿ ಅನಂತ ಪ್ರಕಾಶದ ಗಾಯತ್ರೀ ಪ್ರಕಾಶನದಿಂದ ಪ್ರಕಟಿತ 169ನೇ ಕೃತಿ ರಾಧಾಕೃಷ್ಣ ಕಲ್ಚಾರ್ ಅವರ ಲೇಖನಗಳ ಕೃತಿ ತಲ್ಲಣಿಸದಿರು ಮನವೆ, 170ನೆಯ ಕೃತಿ ಕಲ್ಚಾರ್ ಅವರ ಕಾದಂಬರಿ ಕೂಡುಮನೆ ಹಾಗೂ 171ನೆಯ ಕೃತಿ ಟಿ.ಎಂ. ರಮೇಶ್ ಅವರ ಲಲಿತಪ್ರಬಂಧಗಳ ಸಂಕಲನ ನಗುಬಿಗು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಡಾ. ಭಾಸ್ಕರನಾಂದ ಕುಮಾರ್ ಮಾತನಾಡಿ ಸಾಹಿತ್ಯದ ಬರವಣಿಗೆ, ಓದು ಹಾಗೂ ಕೇಳುವಿಕೆಗಳು ಮನಸ್ಸಿನ ಆನಂದವನ್ನು ಹೆಚ್ಚಿಸುತ್ತವೆ, ಕಿನ್ನಿಗೋಳಿಯ ಅನಂತ ಪ್ರಕಾಶ ಸಂಸ್ಥೆ ನಡೆಸಿಕೊಂಡು ಬರುತ್ತಿರುವ ಸಾಹಿತ್ಯ ಚಟುವಟಿಕೆಗಳು ಅಭಿನಂದನೀಯ.

ಕಲ್ಚಾರ್ ಅವರ ಕೃತಿಯ ಓದು ಪುರಾಣದ ಜ್ಞಾನದಾಹಿಗೆ ಉತ್ತಮ ಕೃತಿ ಎಂದರು. ಉಡುಪಿಯ ಮುರಳಿ ಕಡೆಕಾರ್ ಮಾತನಾಡಿ, ತಾಳಮದ್ದಲೆ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕಲ್ಚಾರ್ ಅವರ ಕಾದಂಬರಿ ಕೂಡುಮನೆ ಸರಾಗ ಓದಿಸಿಕೊಂಡು ಹೋಗುವ ಉತ್ತಮ ಕೃತಿ. ಹಿಂದಿನ ಕೂಡುಕುಟುಂಬದ ಬಾಂಧವ್ಯದ ಸೊಗಸು ಇಂದಿಲ್ಲ. ಸ್ವಾರ್ಥದ ಬದುಕಿನ ಮನಸ್ಥಿತಿಯಿಂದಾಗಿ ಮನೆಗಳು ಒಡೆದುಹೋಗುತ್ತಿವೆ ಎಂದರು.

ಅನಂತ ಪ್ರಕಾಶ ಸಂಸ್ಥೆಯ ಕೊಡೆತ್ತೂರು ಸಚ್ಚಿದಾನಂದ ಉಡುಪ, ಕೃತಿಕಾರ ರಾಧಾಕೃಷ್ಣ ಕಲ್ಚಾರ್ ಕೊಡೆತ್ತೂರು ವೇದವ್ಯಾಸ ಉಡುಪ ಪ್ರಕಾಶ್ ಆಚಾರ್ ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!