ಮುಲ್ಕಿ: ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡದ ಮತ್ತು ಸಾಹಿತ್ಯದ ಕೆಲಸಗಳು ನಡೆಯುತ್ತಲೇ ಇರುತ್ತವೆ. ಆ ಮೂಲಕ ಕನ್ನಡದ ಮನಸ್ಸು ಕ್ರಿಯಾಶೀಲವಾಗಿರುತ್ತದೆ ಎಂದು ಮೂಡುಬಿದ್ರೆ ಡಾ. ಮೋಹನ ಆಳ್ವ ಹೇಳಿದರು.
ಅವರು ಶುಕ್ರವಾರ ಕಿನ್ನಿಗೋಳಿ ಅನಂತ ಪ್ರಕಾಶದ ಗಾಯತ್ರೀ ಪ್ರಕಾಶನದಿಂದ ಪ್ರಕಟಿತ 169ನೇ ಕೃತಿ ರಾಧಾಕೃಷ್ಣ ಕಲ್ಚಾರ್ ಅವರ ಲೇಖನಗಳ ಕೃತಿ ತಲ್ಲಣಿಸದಿರು ಮನವೆ, 170ನೆಯ ಕೃತಿ ಕಲ್ಚಾರ್ ಅವರ ಕಾದಂಬರಿ ಕೂಡುಮನೆ ಹಾಗೂ 171ನೆಯ ಕೃತಿ ಟಿ.ಎಂ. ರಮೇಶ್ ಅವರ ಲಲಿತಪ್ರಬಂಧಗಳ ಸಂಕಲನ ನಗುಬಿಗು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಡಾ. ಭಾಸ್ಕರನಾಂದ ಕುಮಾರ್ ಮಾತನಾಡಿ ಸಾಹಿತ್ಯದ ಬರವಣಿಗೆ, ಓದು ಹಾಗೂ ಕೇಳುವಿಕೆಗಳು ಮನಸ್ಸಿನ ಆನಂದವನ್ನು ಹೆಚ್ಚಿಸುತ್ತವೆ, ಕಿನ್ನಿಗೋಳಿಯ ಅನಂತ ಪ್ರಕಾಶ ಸಂಸ್ಥೆ ನಡೆಸಿಕೊಂಡು ಬರುತ್ತಿರುವ ಸಾಹಿತ್ಯ ಚಟುವಟಿಕೆಗಳು ಅಭಿನಂದನೀಯ.
ಕಲ್ಚಾರ್ ಅವರ ಕೃತಿಯ ಓದು ಪುರಾಣದ ಜ್ಞಾನದಾಹಿಗೆ ಉತ್ತಮ ಕೃತಿ ಎಂದರು. ಉಡುಪಿಯ ಮುರಳಿ ಕಡೆಕಾರ್ ಮಾತನಾಡಿ, ತಾಳಮದ್ದಲೆ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕಲ್ಚಾರ್ ಅವರ ಕಾದಂಬರಿ ಕೂಡುಮನೆ ಸರಾಗ ಓದಿಸಿಕೊಂಡು ಹೋಗುವ ಉತ್ತಮ ಕೃತಿ. ಹಿಂದಿನ ಕೂಡುಕುಟುಂಬದ ಬಾಂಧವ್ಯದ ಸೊಗಸು ಇಂದಿಲ್ಲ. ಸ್ವಾರ್ಥದ ಬದುಕಿನ ಮನಸ್ಥಿತಿಯಿಂದಾಗಿ ಮನೆಗಳು ಒಡೆದುಹೋಗುತ್ತಿವೆ ಎಂದರು.
ಅನಂತ ಪ್ರಕಾಶ ಸಂಸ್ಥೆಯ ಕೊಡೆತ್ತೂರು ಸಚ್ಚಿದಾನಂದ ಉಡುಪ, ಕೃತಿಕಾರ ರಾಧಾಕೃಷ್ಣ ಕಲ್ಚಾರ್ ಕೊಡೆತ್ತೂರು ವೇದವ್ಯಾಸ ಉಡುಪ ಪ್ರಕಾಶ್ ಆಚಾರ್ ಉಪಸ್ಥಿತರಿದ್ದರು..
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…