ಬಿ.ಸಿ.ರೊಡಿನ ಕೈಕಂಬದಲ್ಲಿರುವ ಖಾಸಗಿ ಖಾಲಿ ಜಾಗವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ.
ಹುಲ್ಲಿನಿಂದ ತುಂಬಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೇಗೆ ಆಯಿತು ಎಂಬ ಕುರಿತು ಇನ್ನಷ್ಟೇ ತಿಳಿದುಬರಬೇಕಿದೆ. ಮಾಹಿತಿ ದೊರೆತ ಕೂಡಲೇ ಸ್ಥಳೀಯರು ಬಂಟ್ವಾಳದ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅಗ್ನಿನಂದಕ ವಾಹನ ಮಂಚಿಯಿಂದ ಬಂದ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.
ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂಕಿ ವ್ಯಾಪಿಸಿದೆ. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಾದ ಸಮದ್ ಕೈಕಂಬ ಮತ್ತಿತರರು, ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿಸಿ ಅಧ್ಯಕ್ಷ ಸುರೇಶ್ ಕುಲಾಲ್ ಮತ್ತಿತರು ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…