ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ರಾ.ಹೆ.66 ರ ಕಾಪಿಕಾಡು ಎಂಬಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಲಪಾಡಿಯ ಶಾರದಾ ನಿಕೇತನ ವಿದ್ಯಾಸಂಸ್ಥೆಗೆ ಸೇರಿದ ಬಸ್ಸು ಕಾಪಿಕಾಡಿನ ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನು ಬಸ್ಸಿಗೆ ಹತ್ತಿಸಿ ತಲಪಾಡಿ ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಮೀನಿನ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಗೋವಾದಿಂದ ಕೇರಳದ ಕಡೆಗೆ ಟ್ಯಾಂಕರ್ನಲ್ಲಿ ಮೀನು ಸಾಗಿಸಲಾಗುತ್ತಿತ್ತು. ಕುಂದಾಪುರ ಮೂಲದ ಚಾಲಕ ಸಂಜೀವ ಎಂಬವರು ನಿದ್ರೆಯ ಮಂಪರಿನಲ್ಲಿದ್ದ ಪರಿಣಾಮ ಅಪಘಾತ ನಡೆದಿದೆ. ಘಟನೆಯಿಂದ ಬಸ್ಸಿನೊಳಗಿದ್ದ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಓರ್ವ ವಿದ್ಯಾರ್ಥಿಯ ಕಾಲಿಗೆ ಗಾಯವಾಗಿದ್ದು ಆತನನ್ನ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಒಟ್ಟು 24 ರಷ್ಟು ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…