Oplus_0
ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ, ಇಲ್ಲ ಸಲ್ಲದ ಮಾನಹಾನಿ ಹಾಗೂ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿರುವುದು ತುಂಬಾ ಬೇಸರದ ಸಂಗತಿ ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ ರೈ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ರಾಜರಾಜೇಶ್ವರಿ ದೇವಸ್ಥಾನ ಇದರ ಆಡಳಿತ ಮೊಕ್ತೇಸರರಾದ ಕೆ.ಕೆ. ಶೆಟ್ಟಿ ಕುತ್ತಿಕ್ಕಾರು ಮಾತನಾಡಿ, ಕೆಲವು ದಿನಗಳಿಂದ ನಡೆಯುತ್ತಿರುವ ಘಟನೆಗಳಿಂದ ಮನನೊಂದು ಕುಳೂರು ಕನ್ಯಾನ ಡಾ| ಸದಾಶಿವ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯೊಂದನ್ನು ನೀಡಿರುವುದು ಸಮಸ್ತ ಕಾಸರಗೋಡು ಜಿಲ್ಲೆಯ ಬಂಟಬಾಂಧವರಿಗೆ ಆಘಾತ ಉಂಟು ಮಾಡಿರುತ್ತದೆ. ಕಾಸರಗೋಡಿನ ಬಂಟರು ಎಲ್ಲರೂ ಒಗ್ಗಟ್ಟಿನಿಂದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಆಗಿರುವ ನೋವಿನಲ್ಲಿ ನಾವು ಪೂರ್ಣ ಪ್ರಮಾಣದಲ್ಲಿ ಭಾಗಿಯಾಗಿರುತ್ತೇವೆ ಎಂದರು.
ಮುಂದಿನ ದಿನಗಳಲ್ಲಿ ಡಾ| ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪೂರ್ಣ ಬೆಂಬಲವನ್ನು ಈ ಮೂಲಕ ನೀಡುತ್ತೇವೆ. ಸಮಾಜ ಬಾಂಧವರಲ್ಲಿ ವಿನಂತಿಯೇನೆಂದರೆ ಇಂದಿನವರೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಸಾಮರಸ್ಯದಿಂದ ಹಾಗೂ ಸೌಹಾರ್ದತೆಯಿಂದ ನಡೆದುಕೊಂಡು ಬಂದಿರುತ್ತೇವೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ನಡೆದುಕೊಳ್ಳಬೇಕಾಗಿ ಎಲ್ಲಾ ಸಮಾಜ ಭಾಂದವರಲ್ಲಿ ಕಳಕಳಿಯಿಂದ ವಿನಯಪೂರ್ವಕವಾಗಿ ವಿನಂತಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮೋಹನ ರೈ ಕಯ್ಯಾರು, ಗೋಪಾಲಕೃಷ್ಣ ಶೆಟ್ಟಿ ಕುತ್ತಿಕ್ಕಾರು, ಕಾರ್ತಿಕ್ ಶೆಟ್ಟಿ ಮಜ್ಜಿಬೈಲ್, ಸುರೇಶ್ ಶೆಟ್ಟಿ ಕುಂಜತ್ತೂರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…