ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಗುಂಡೇಟಿನಿಂದ ಬಾಲಕ ಸಾವು; ವರದಿಯಲ್ಲಿ ಹೊರಬಿದ್ದ ಸ್ಪೋಟಕ ಮಾಹಿತಿ..!

ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ ಶೂಟ್ ಮಾಡಿರುವುದು ದೃಢಪಟ್ಟಿದೆ.

ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಹಾಗೂ ಜಯಶ್ರೀ ದಂಪತಿ ಪುತ್ರ ಮೋಕ್ಷ್, ಪಾದೆ ಮನೆಯಲ್ಲಿ ಗುಂಡೇಟಿನಿಂದ ಮೃತಪಟ್ಟಿದ್ದರು. ಮೋಕ್ಷ್ ತಂದೆಗೆ ಇರಿದು ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ಆರಂಭದಲ್ಲಿ ಮಾಹಿತಿ ಹರಿದಾಡಿತ್ತು. ಆದರೆ ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಮೋಕ್ಷ್ ತಂದೆ ವಸಂತ್ ಅಮೀನ್ ಗೆ ಗುಂಡೇಟು ತಗುಲಿದ್ದು ದೃಢಪಟ್ಟಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಈ ಘಟನೆ ಮೊದಲು ಬೆಳಕಿಗೆ ಬಂದಾಗ, ಕೌಟುಂಬಿಕ ಕಲಹದ ಕಾರಣದಿಂದಾಗಿ ಮೋಕ್ಷ್ ತನ್ನ ತಂದೆಯ ಹೊಟ್ಟೆಗೆ ಚಾಕುವಿನಿಂದ ಇರಿದು ನಂತರ ತನ್ನ ತಂದೆಯ ಪರವಾನಗಿ ಪಡೆದ ಬಂದೂಕನ್ನು ತಾನೇ ತಿರುಗಿಸಿಕೊಂಡಿದ್ದಾನೆ ಎಂದು ವರದಿಯಾಗಿತ್ತು. ವಸಂತ್ ಅಮೀನ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಇದೀಗ ವಿವರವಾದ ವೈದ್ಯಕೀಯ ಪರೀಕ್ಷೆಗಳು ವಸಂತ್ ಅಮೀನ್ ಅವರ ಹೊಟ್ಟೆಯ ಮೇಲಿನ ಗಾಯವು ಬಂದೂಕಿನ ಗುಂಡಿನಿಂದ ಉಂಟಾಗಿದೆಯೇ ಹೊರತು ಚಾಕುವಿನಿಂದಲ್ಲ ಎಂದು ದೃಢಪಡಿಸಿವೆ. ಮಗ ಮೋಕ್ಷ್ನನ್ನು ತಂದೆ ವಸಂತ ಅವರೇ ಕೊಲೆ ಮಾಡಿರುವುದಾಗಿ ತಾಯಿ ಜಯಶ್ರೀ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ಎಫ್‌ಎಸ್‌ಎಲ್ ವರದಿ ಬಂದ ಬಳಿಕವೇ ಈ ಪ್ರಕರಣಕ್ಕೆ ಪ್ರಮುಖ ಕಾರಣ ಎನೆಂದು ತಿಳಿದು ಬರಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!