ಖಾಸಗಿ ಕಂಪೆನಿಯೊಂದರ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದ್ದಲ್ಲದೆ ಕಾರ್ಮಿಕರ ಜೊತೆ ವಾಗ್ವಾದ ನಡೆದಿರುವ ಘಟನೆ ಕೈಕಂಬದಲ್ಲಿ ನಡೆದಿದೆ.
ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಪೋಲೀಸ್ ಪಾಯಿಂಟ್ನ ಪಕ್ಕ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಗೇಲ್ ಗ್ಯಾಸ್ ಕಂಪೆನಿಯವರಿಂದ ಕಾಮಗಾರಿ ನಡೆಯುತಿದ್ದು, ರಸ್ತೆ ಬದಿ ಹಾಗೂ ರಸ್ತೆಗೂ ಕೆಸರು ಮಿಶ್ರಿತ ನೀರು ಹರಿದುಹೋಗಿದೆ. ಇದರಿಂದ ವಾಹನಗಳು ಕೆಸರು ಮಯವಾದರೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳು ಎದ್ದು ಬಿದ್ದು ಹೋಗುವಂತಾಗಿದೆ.
ಬಿಸಿಲು ಮಳೆಗೆ ಸ್ವಲ್ಪ ಮಟ್ಟಿಗೆ ರಕ್ಷಣೆಗೆ ಮಾಡಿರುವ ಪೋಲೀಸ್ ಪಾಯಿಂಟ್ನ ಸುತ್ತಲೂ ಕೆಸರು ತುಂಬಿದ್ದು, ಪೋಲೀಸರಿಗೂ ಸಂಕಟವನ್ನು ತಂದುಕೊಟ್ಟಿದೆ. ಸಾರ್ವಜನಿಕರಿಗೆ ಈ ರೀತಿಯ ಸಂಕಷ್ಟ ಎದುರಾದ ಸಂದರ್ಭದಲ್ಲಿ ಕಂಪೆನಿ ಮೌನವಾಗಿರುವುದನ್ನು ಕಂಡು ಸಾರ್ವಜನಿಕರು ಅಕ್ರೋಶ ಭರಿತರಾಗಿ ಕಾರ್ಮಿಕರ ಜೊತೆ ವಾಗ್ವಾದ ಮಾಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…