ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಈತ ತನ್ನ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬAದಿದೆ.
ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…