ಕರಾವಳಿ

ವಿಟ್ಲ: ಡಾ. ಕನ್ಯಾನ ಅವರ ಕಠಿಣ ನಿರ್ಧಾರದಿಂದ ಹಿಂದೆ ಸರಿದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು; ರಾಜೀವ್ ಭಂಡಾರಿ ಕುಂಡಕೋಳಿ ಮನವಿ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ಯಾನ ಸದಾಶಿವ ಶೆಟ್ಟಿಯವರು ನೋವಿನಿಂದ ಮಾತನಾಡಿರುವ ವಿಡಿಯೋ ಹಿನ್ನೆಲೆ ವಿಟ್ಲ ವಲಯ ಬಂಟರ ಸಂಘದಿಂದ ಅವರಿಗೆ ಬೆಂಬಲ ವ್ಯಕ್ತಪಡಿಸಲಾಗಿದೆ.

ಸದಾಶಿವ ಶೆಟ್ಟಿ ಅವರು ಅಶಕ್ತರು, ಬಡವರು, ವಿದ್ಯಾರ್ಥಿಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ನೀಡಿರುವ ಸೇವೆ ಅಪಾರವಾಗಿದೆ. ಅವರ ಮನಸ್ಸಿಗೆ ನೋವುಂಟು ಮಾಡಿದವರನ್ನು ಸಮಾಜ ಖಂಡಿಸುತ್ತಿದ್ದು, ಅವರು ತೆಗೆದುಕೊಂಡ ಕಠಿಣ ನಿರ್ಧಾರದಿಂದ ಹಿಂದೆ ಸರಿದು ಹಿಂದಿನಂತೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ರಾಜೀವ್ ಭಂಡಾರಿ ಕುಂಡಕೋಳಿ ಅವರು ವಿಟ್ಲ ವಲಯ ಬಂಟರ ಸಂಘದ ಪರವಾಗಿ ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಮನವಿ ಮಾಡಿದ್ದಾರೆ. ಕೊಡುಗೈದಾನಿ, ಅಶಕ್ತರ ಬಾಳಿನ ಆಶಾಕಿರಣ ಅದೆಷ್ಟೋ ನೊಂದವರ ಕಣ್ಣೀರು ಒರೆಸಿದ ಸದಾಶಿವಣ್ಣನವರು ಬಹಳಷ್ಟು ನೊಂದು ಆಡಿದ ಮಾತುಗಳನ್ನು ಕೇಳಿ ನನಗೆ ಮಾತ್ರವಲ್ಲ ಜಾತ್ಯಾತೀತವಾಗಿ ಇಡೀ ಸಮಾಜಕ್ಕೆ ಖೇದ ವಾಗಿದೆ. ದಾನದ ಮೂಲಕ ನಮ್ಮ ಜಿಲ್ಲೆ ಮಾತ್ರವಲ್ಲ, ಇಡೀ ರಾಜ್ಯವೇ ತಿರುಗಿ ನೋಡುವಂತಹ ಉದಾತ್ತ ಗುಣದವರಾದ ತಮ್ಮ ಹಾಲಿನಂತಹ ಮನಸ್ಸಿಗೆ ಘಾಸಿ ಆಗುವುದನ್ನು ಯಾರು ಸಹಿಸುವುದಿಲ್ಲ. ತಮ್ಮ ಮನಸ್ಸಿಗೆ ನೋವು ಉಂಟು ಮಾಡಿದವರು ಯಾರೇ ಆಗಲಿ ಅದನ್ನು ನಮ್ಮ ವಿಟ್ಲ ಬಂಟರ ಸಮಾಜ ಮಾತ್ರವಲ್ಲ ಸಮಾಜದ ಪ್ರತಿಯೊಬ್ಬರು ಖಂಡಿಸುತ್ತಾರೆ.

ಸದಾಶಿವಣ್ಣ, ತಾವು ನೊಂದು ತೆಗೆದುಕೊಂಡ ನಿರ್ಧಾರದಿಂದ ಇಡೀ ಅಶಕ್ತ ಸಮಾಜ ಬಡವಾಗುತ್ತದೆ. ಅದು ಏನೇ ಇರಲಿ ಸದಾಶಿವಣ್ಣನ ಜೊತೆ ನಾವು ವಿಟ್ಲ ವಲಯದ ಬಂಟರಿದ್ದೇವೆ, ತಾವು ನಮ್ಮ ಸಮಾಜಕ್ಕೆ ಒಂದು ದಿವ್ಯ ಶಕ್ತಿಯಾಗಿದ್ದೀರಿ, ಆ ಶಕ್ತಿ ಕುಂದುವುದನ್ನು ಯಾರು ಸಹಿಸುವುದಿಲ್ಲ ಇಡೀ ಸಮಾಜವೇ ತಮ್ಮೊಂದಿಗಿರುವಾಗ ತಾವು ನೊಂದುಕೊಳ್ಳುವ ಅವಶ್ಯಕತೆ ಇರುವುದಿಲ್ಲ, ಯಾರೋ ಬೆರಳೆಣಿಕೆಯ ಪಟ್ಟಭದ್ರ ಹಿತಾ ಶಕ್ತಿಯ ಮಾತುಗಳಿಗೆ ಅಥವಾ ಕುಕೃತ್ಯಕ್ಕೆ ತಾವು ಧೃತಿಕೆಡಬೇಕಾಗಿಲ್ಲ, ತಾವು ತಮ್ಮ ಜನಹಿತ ಕಾರ್ಯದಿಂದ ಹಿಂದೆ ಸರಿದರೆ ಎಲ್ಲಾ ವರ್ಗದ ಸಮಾಜ ಬಹಳ ಬೆಲೆ ತೆರಬೇಕಾಗಿದೆ, ತಾವು ಇಷ್ಟು ಸಮಯ ಮಾಡಿದ ಸಮಾಜ ಹಿತ ಕಾರ್ಯವನ್ನು ನಮ್ಮ ಜನ ಯಾವತ್ತು ಮರೆಯಲು ಸಾಧ್ಯವಿಲ್ಲ. ತಾವು ಮಾಡಿಕೊಂಡು ಬಂದ ಸೇವಾ ಕಾರ್ಯದಿಂದ ತಮ್ಮ ವಿದ್ಯಾಭ್ಯಾಸವನ್ನು ಅರ್ಧದಲ್ಲಿ ಮೊಟಕುಗೊಳಿಸುವ ಅದೆಷ್ಟೋ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ, ಅದೆಷ್ಟೋ ದೇವಸ್ಥಾನಗಳು ಜೀಣೋದ್ಧಾರವನ್ನು ಕಂಡಿವೆ. ಅದೆಷ್ಟೋ ರೋಗಿಗಳು ಸಾವಿನ ದವಡೆಯಿಂದ ಪಾರಾಗಿ ಜೀವನವನ್ನು ಮುಂದುವರಿಸಿದ್ದಾರೆ, ಅದೆಷ್ಟೋ ವಸತಿಹೀನರು ವಸತಿ ನಿರ್ಮಿಸಿಕೊಂಡು ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ, ಇಂತಹ ಒಬ್ಬ ದೇವಸಮಾನ ಮಹಾನ್ ವ್ಯಕ್ತಿಯನ್ನು ನಮ್ಮ ಸಮಾಜ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಆದ್ದರಿಂದ ಸದಾಶಿವಶೆಟ್ಟರಲ್ಲಿ ನಮ್ಮೆಲ್ಲರ ಬೇಡಿಕೆ ತಾವು ತೆಗೆದುಕೊಂಡ ಕಠಿಣ ನಿರ್ಧಾರದಿಂದ ಹಿಂದೆ ಸರಿದು ಈ ಮೊದಲಿನಂತೆಯೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಆಧಾರವಾಗಬೇಕಾಗಿ ನಮ್ಮೆಲ್ಲರ ಕೋರಿಕೆ ಆಗಿದೆ. ಸದಾಶಿವಣ್ಣ ಈ ರೀತಿಯ ಅಪಪ್ರಚಾರಗಳು ಸಮಾಜಮುಖಿಯಾಗಿ ಕೆಲಸ ಮಾಡುವವರಿಗೆ ಸರ್ವೇ ಸಾಮಾನ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬಂಟರ ಸಂಘ ವಿಟ್ಲ ವಲಯದ ಗೌರವ ಅಧ್ಯಕ್ಷರಾದ ರಾಧಾಕೃಷ್ಣ ಚೆಲ್ಲಡ್ಕ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿ ಮರುವಾಳ, ಗೌರವ ಸಲಹೆಗಾರರಾದ ಪ್ರಭಾಕರ್ ಶೆಟ್ಟಿ ದಂಬೆಕಾನ, ತಾಂತ್ರಿಕ ಸಲಹೆಗಾರರಾದ ಭಾಸ್ಕರ ರೈ ಮೂಡ0ಬೈಲು ಪ್ರೆಸ್ ಮೀಟ್ ನಲ್ಲಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…

23 hours ago

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…

23 hours ago

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

3 days ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

3 days ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

3 days ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

4 days ago