ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು 24ರ ಹರೆಯದ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ನಿಧನಹೊಂದಿದ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ ಅವರ ಮೂವರು ಪುತ್ರರಲ್ಲಿ ಎರಡನೇಯವರಾದ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನರಾಗಿರುವ ಯುವಕ. ಸಿದ್ದಕಟ್ಟೆಯ ಯಂತ್ರೋಪಕರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಅರಂತಾಡಿ ಮನೆಯೊಂದರಲ್ಲಿ ಕೃಷಿ ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಸಿದ್ದಕಟ್ಟೆಯ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಪಡೆದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅದಾಗಲೇ ಪ್ರಶಾಂತ್ ಆಚಾರ್ಯ ಸಾವನ್ನಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಹಿಂದೂಸಂಘಟನೆ ಹಾಗೂ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಈತ ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…