ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವರ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿಯಲ್ಲಿ ನಡೆದಿದೆ.
ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10 ನೇ ತರಗತಿಯ ವಿದ್ಯಾರ್ಥಿನಿ, ಬೆಂಗಳೂರು ಮೂಲದ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ವೈಗಲಕ್ಷ್ಮಿರವರು ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿದೆಡೆ ಹುಡುಕಾಟ ನಡೆಸಿದರು ಅವರು ಪತ್ತರಯಾಗಿರಲಿಲ್ಲ. ಇದೀಗ ಅಲ್ಲೇ ಪಕ್ಕದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರರವರ ತಂಡ ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…