ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಭೂಮಿ ಪೂಜೆ ನಡೆದಿದೆ.
ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು ನನ್ನ ಗಮನದಲ್ಲಿದೆ. ಮೊದಲು ಇಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಿಸಿ ನಂತರ ರಸ್ತೆ ನಿರ್ಮಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ.
ಸ್ಥಳೀಯ ಬಿಜೆಪಿ ಮುಖಂಡರಾದ ಚಂದ್ರಶೇಖರ ಬಜಾಲ್ರವರ ವಿಶೇಷ ಮನವಿ ಮೇರೆಗೆ ಈ ಕಾಮಗಾರಿ ನಡೆಯುತ್ತಿದ್ದು, ಈ ಹಿಂದಿನ 2022-23 ನೇ ಸಾಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡಿರುವ ಕಾಮಗಾರಿಯಾಗಿದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುಕೇಶ್, ಸುರೇಶ್ ರಾವ್, ಶಿವಾನಂದ, ರಹೀಮ್, ಲಕ್ಷ್ಮಿ, ಸರಸ್ವತಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…