ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಗಂಗೊಳ್ಳಿಯಲ್ಲಿ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ!

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ.

ಬೋಟಿನಲ್ಲಿದ್ದ ಮೀನುಗಾರರಾದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಪಾರಾದವರು. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ಶ್ರೀದುರ್ಗಾಪರಮೇಶ್ವರಿ ಬೋಟಿನ ಅಡಿಭಾಗಕ್ಕೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ, ಎಂಜಿನಿನ ಅಡಿ ಭಾಗದಲ್ಲಿ ನೀರು ಒಳ ಬರಲು ಆರಂಭಿಸಿತ್ತು. ನೀರು ತುಂಬಿ ಬೋಟಿನ ಎಂಜಿನ್ ಸ್ಥಗಿತಗೊಂಡಿದೆ. ಕೂಡಲೇ ಬೋಟಿನಲ್ಲಿದ್ದವರು ನೀರು ಖಾಲಿ ಮಾಡಲು ಪ್ರಯತ್ನಿಸಿದರೂ ಆಗಲಿಲ್ಲ. ಅನಂತರ ಸಹಾಯಕ್ಕಾಗಿ ಮಲ್ಪೆ ಬಂದರಿನಿಂದ ಶ್ರೀಕೃಷ್ಣ ಬೋಟಿನವರು ಹಾಗೂ ಕೋಸ್ಟ್ ಗಾರ್ಡ್ ಬಂದು ಬೋಟಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಳಿಕ ಬೋಟನ್ನು ಶ್ರೀ ಕೃಷ್ಣ ಬೋಟಿನವರು ಹಗ್ಗ ಕಟ್ಟಿ ಎಳೆದು ಗಂಗೊಳ್ಳಿ ಬಂದರಿನಿAದ ಸುಮಾರು 8-9 ನಾಟಿಕಲ್ ಮೈಲು ದೂರದಲ್ಲಿ ಎಳೆದುಕೊಂಡು ಬರುವಾಗ ಗಾಳಿ ಹಾಗೂ ಅಲೆಗಳ ಅಬ್ಬರದಿಂದಾಗಿ ಹಗ್ಗ ತುಂಡಾಗಿ, ಬೋಟು ಸಂಪೂರ್ಣ ಮುಳುಗಡೆಯಾಗಿದೆ. ಇದರಿಂದ ಅಂದಾಜು 60-65 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮಾಲಕ ನಾಗರಾಜ್ ಪುತ್ರನ್ ದೂರಿನಲ್ಲಿ ತಿಳಿಸಿದ್ದಾರೆ. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!