ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ.
ಬೋಟಿನಲ್ಲಿದ್ದ ಮೀನುಗಾರರಾದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಪಾರಾದವರು. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ಶ್ರೀದುರ್ಗಾಪರಮೇಶ್ವರಿ ಬೋಟಿನ ಅಡಿಭಾಗಕ್ಕೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ, ಎಂಜಿನಿನ ಅಡಿ ಭಾಗದಲ್ಲಿ ನೀರು ಒಳ ಬರಲು ಆರಂಭಿಸಿತ್ತು. ನೀರು ತುಂಬಿ ಬೋಟಿನ ಎಂಜಿನ್ ಸ್ಥಗಿತಗೊಂಡಿದೆ. ಕೂಡಲೇ ಬೋಟಿನಲ್ಲಿದ್ದವರು ನೀರು ಖಾಲಿ ಮಾಡಲು ಪ್ರಯತ್ನಿಸಿದರೂ ಆಗಲಿಲ್ಲ. ಅನಂತರ ಸಹಾಯಕ್ಕಾಗಿ ಮಲ್ಪೆ ಬಂದರಿನಿಂದ ಶ್ರೀಕೃಷ್ಣ ಬೋಟಿನವರು ಹಾಗೂ ಕೋಸ್ಟ್ ಗಾರ್ಡ್ ಬಂದು ಬೋಟಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಳಿಕ ಬೋಟನ್ನು ಶ್ರೀ ಕೃಷ್ಣ ಬೋಟಿನವರು ಹಗ್ಗ ಕಟ್ಟಿ ಎಳೆದು ಗಂಗೊಳ್ಳಿ ಬಂದರಿನಿAದ ಸುಮಾರು 8-9 ನಾಟಿಕಲ್ ಮೈಲು ದೂರದಲ್ಲಿ ಎಳೆದುಕೊಂಡು ಬರುವಾಗ ಗಾಳಿ ಹಾಗೂ ಅಲೆಗಳ ಅಬ್ಬರದಿಂದಾಗಿ ಹಗ್ಗ ತುಂಡಾಗಿ, ಬೋಟು ಸಂಪೂರ್ಣ ಮುಳುಗಡೆಯಾಗಿದೆ. ಇದರಿಂದ ಅಂದಾಜು 60-65 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮಾಲಕ ನಾಗರಾಜ್ ಪುತ್ರನ್ ದೂರಿನಲ್ಲಿ ತಿಳಿಸಿದ್ದಾರೆ. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದೂರು ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…