ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಮಕ್ಕಳ ಅಪಹರಣ ವದಂತಿ; ಸಾರ್ವಜನಿಕರು ಭಯಭೀತರಾಗುವ ಅಗತ್ಯವಿಲ್ಲ- ಸುಧೀರ್ ಕುಮಾರ್ ರೆಡ್ಡಿ!

ಮಂಗಳೂರು ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ವಾಯ್ಸ್ ಮೆಸೇಜ್ ಹರಿಬಿಟ್ಟಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ, “ರಸ್ತೆಯಲ್ಲಿ ಕೆಲವು ವಿದ್ಯಾರ್ಥಿಗಳು ಮಾತನಾಡಿಕೊಳ್ಳುತ್ತಿದ್ದ ವಿಷಯವನ್ನು ಕೇಳಿಸಿಕೊಂಡು ನಾನು ಈ ಆಡಿಯೋ ಮಾಡಿದ್ದೆ” ಎಂದು ಹೇಳಿಕೆ ನೀಡಿದ್ದಾರೆ. ಅಂದರೆ, ಆಕೆ ಘಟನೆಯನ್ನು ಪ್ರತ್ಯಕ್ಷವಾಗಿ ಕಂಡಿಲ್ಲ, ಬದಲಿಗೆ ಕೇವಲ ಕೇಳಿಬಂದ ಮಾತಿನ ಆಧಾರದ ಮೇಲೆ ಆಡಿಯೋ ಹಂಚಿಕೊAಡಿದ್ದಾರೆ ಎಂದು ಕಮಿಶನರ್ ಹೇಳಿದ್ದಾರೆ. “ಸಾರ್ವಜನಿಕರು ಅನಗತ್ಯವಾಗಿ ಭಯಭೀತರಾಗುವ ಅಗತ್ಯವಿಲ್ಲ. ಕಿಡ್ನಾಪ್ ಹೆಸರಿನಲ್ಲಿ ಹರಡುತ್ತಿರುವ ಇಂತಹ ನಕಲಿ ಸಂದೇಶಗಳನ್ನು ಶೇರ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!