ಮಂಗಳೂರು: ಸಿಎ ಅಂತಿಮ ಪರೀಕ್ಷೆಯಲ್ಲಿ ಮುಹಮ್ಮದ್ ಶಿಹಾಬುದ್ದೀನ್ ಉತ್ತೀರ್ಣ
Institute of Chartered Accountants of India 2026ರ ಜನವರಿಯಲ್ಲಿ ನಡೆಸಿದ ಸಿಎ (Chartered Accountant) ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಯುವ ಪ್ರತಿಭೆ ಮುಹಮ್ಮದ್ ಶಿಹಾಬುದ್ದೀನ್ ಅವರು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಮಂಗಳೂರಿನ ಕುಕ್ಕಾಜೆ ನಿವಾಸಿಯಾದ ಅಬ್ದುಲ್ ಮಜೀದ್ ಅವರ ಪುತ್ರ ಮುಹಮ್ಮದ್ ಶಿಹಾಬುದ್ದೀನ್ ಅವರು ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯಿಂದ ಸಿಎ ಅಂತಿಮ ಪರೀಕ್ಷೆಯನ್ನು ಪಾಸಾಗಿ ತಮ್ಮ ಕುಟುಂಬ ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ. ದೇಶದ ಅತ್ಯಂತ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಅವರ ಶ್ರದ್ಧೆ ಮತ್ತು ಸಮರ್ಪಣೆಯ ಪ್ರತಿಫಲವಾಗಿದೆ.
ಶಿಹಾಬುದ್ದೀನ್ ಅವರ ಸಾಧನೆಗೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಲೆಕ್ಕಪತ್ರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ ಇನ್ನಷ್ಟು ಯಶಸ್ಸುಗಳನ್ನೇರಲಿ ಎಂದು ಹಾರೈಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…