ಕಾಲು ಟಚ್ ಆಯಿತೆಂಬ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಶಿಕುಮಾರ್ ಕೊಲೆಯಾದ ವ್ಯಕ್ತಿ. ಮಂಜುನಾಥ್ ಮತ್ತು ಭಾಗ್ಯರಾಜ್ ಕೊಲೆಗೈದ ಆರೋಪಿಗಳು. ಕಳೆದ ಮಾರ್ಚ್ 2 ರಂದು ಶಿವನಹಳ್ಳಿ ಪ್ರದೇಶದ ಹೋಟೆಲ್ನಲ್ಲಿ ಶಶಿಕುಮಾರ್ ದೋಸೆ ತಿನ್ನುತ್ತಿದ್ದ. ಮಂಜುನಾಥ್ ಸಹ ಅದೇ ಹೋಟೆಲ್ಗೆ ಬಂದಿದ್ದ. ಈ ವೇಳೆ ಆಕಸ್ಮಿಕವಾಗಿ ಮಂಜುನಾಥ್ ಕಾಲನ್ನು ಶಶಿ ಕುಮಾರ್ ತುಳಿದಿದ್ದಾನೆ. ಇದೇ ವಿಚಾರ ಜಗಳಕ್ಕೆ ಕಾರಣವಾಗಿದೆ. ಮಂಜುನಾಥ್ ಸಹೋದರ ಭಾಗ್ಯರಾಜ್ಗೆ ಕರೆ ಮಾಡಿ ಕರೆಸಿಕೊಂಡಿದ್ದಾನೆ. ಇಬ್ಬರು ಶಶಿಕುಮಾರ್ ಜೊತೆ ಜಗಳವಾಡಿದ್ದಾರೆ. ರೊಚ್ಚಿಗೆದ್ದ ಭಾಗ್ಯರಾಜ್, ಶಶಿಕುಮಾರ್ ಕತ್ತಿಗೆ ಚಾಕು ಇರಿದು ಕೊಂದೇ ಬಿಟ್ಟಿದ್ದಾರೆ. ಈ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…